ರಾಯಚೂರು: ‘ಮತದಾರರು ನನ್ನ ಕೈ ಹಿಡಿದು ಅಭೂತಪೂರ್ವ ಗೆಲುವು ದೊರಕಿಸಿಕೊಟ್ಟಿದ್ದು, ಅವರಿಗೆ ಚಿರಋಣಿ. ರಾಷ್ಟ್ರದ ಸಲುವಾಗಿ ನಡೆದ ಈ ಚುನಾವಣೆಯಲ್ಲಿ ಸ್ಥಳೀಯ, ಹೊರಗಿನವ ಎಂಬ ಬಿಜೆಪಿ ನಾಯಕರ ಪ್ರಚಾರಕ್ಕೆ ಮತದಾರರು ಕಿವಿಗೊಡದೇ ಬಿಜೆಪಿಯ ಆಡಳಿತಕ್ಕೆ ಬೇಸತ್ತು ನನ್ನನ್ನು ಗೆಲ್ಲಿಸಿದ್ದಾರೆ’ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ತಿಳಿಸಿದರು.