ರಾಯಚೂರು: ನಗರದ ಹೈದರಾಬಾದ್ ಬೈಪಾಸ್ ರಸ್ತೆಯಲ್ಲಿ ಕಂಕರ್ ತುಂಬಿದ್ದ ಲಾರಿಯೊಂದು ಮಗುಚಿ ಚಾಲಕ ಸಹಿತ ಸುಟ್ಟುಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಕುಷ್ಟಗಿಯ ಚಾಲಕ ಬಾಲಾಜಿ (25) ಸಜೀವ ದಹನವಾದರು.ಬಳ್ಳಾರಿ ಜಿಲ್ಲೆ ಮರಿಯಮ್ಮನಹಳ್ಳಿಯಿಂದ ತೆಲಂಗಾಣದ ಶಾದ್ನಗರಕ್ಕೆ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿತ್ತು. ಲಾರಿ ಸಂಪೂರ್ಣ ಭಸ್ಮವಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.