<p><strong>ಶಕ್ತಿನಗರ: </strong>ಇಲ್ಲಿಗೆ ಸಮೀಪದ ಡಾಬಾವೊಂದರ ಎದುರು ಲಾರಿ ನಿಲುಗಡೆ ಮಾಡಿಕೊಂಡು ವಿಶ್ರಾಂತಿಗಾಗಿ ಕ್ಯಾಬಿನ್ ಮೇಲೆ ಏರಿದ್ದ ಚಾಲಕನಿಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p>.<p>ತಮಿಳುನಾಡಿನ ಪ್ರಭಾಕರನ್ (49) ಮೃತಪಟ್ಟಿರುವ ಚಾಲಕ. ಚಾಮರಾಜನಗರದಿಂದ ತೆಲಂಗಾಣದ ಮೆಹಬೂಬ್ನಗರಕ್ಕೆ ಹಾಲಿನ ಉತ್ಪನ್ನಗಳನ್ನು ಪೂರೈಕೆ ಮಾಡಿ, ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಉಂಟಾಗಿದೆ. ಜೊತೆಯಲ್ಲಿ ಸಹಚಾಲಕನಿದ್ದು, ಯಾವುದೇ ತೊಂದರೆ ಆಗಿಲ್ಲ.</p>.<p>ಶಕ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೋಮವಾರ ಬೆಳಿಗ್ಗೆ ರಿಮ್ಸ್ ಆಸ್ಪತ್ರೆಗೆ ಶವ ಸಾಗಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ: </strong>ಇಲ್ಲಿಗೆ ಸಮೀಪದ ಡಾಬಾವೊಂದರ ಎದುರು ಲಾರಿ ನಿಲುಗಡೆ ಮಾಡಿಕೊಂಡು ವಿಶ್ರಾಂತಿಗಾಗಿ ಕ್ಯಾಬಿನ್ ಮೇಲೆ ಏರಿದ್ದ ಚಾಲಕನಿಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p>.<p>ತಮಿಳುನಾಡಿನ ಪ್ರಭಾಕರನ್ (49) ಮೃತಪಟ್ಟಿರುವ ಚಾಲಕ. ಚಾಮರಾಜನಗರದಿಂದ ತೆಲಂಗಾಣದ ಮೆಹಬೂಬ್ನಗರಕ್ಕೆ ಹಾಲಿನ ಉತ್ಪನ್ನಗಳನ್ನು ಪೂರೈಕೆ ಮಾಡಿ, ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಉಂಟಾಗಿದೆ. ಜೊತೆಯಲ್ಲಿ ಸಹಚಾಲಕನಿದ್ದು, ಯಾವುದೇ ತೊಂದರೆ ಆಗಿಲ್ಲ.</p>.<p>ಶಕ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೋಮವಾರ ಬೆಳಿಗ್ಗೆ ರಿಮ್ಸ್ ಆಸ್ಪತ್ರೆಗೆ ಶವ ಸಾಗಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>