<p>ರಾಯಚೂರು: ಕಳಪೆ ಮಟ್ಟದ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯದಲ್ಲಿಬುಧವಾರ ವಿದ್ಯಾರ್ಥಿಗಳು ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಹುಳು ಮಿಶ್ರಿತ ಆಹಾರ ನೀಡುತ್ತಿದ್ದಾರೆ. ಇಂತಹ ಆಹಾರ ಸೇವಿಸಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮೇಲ್ವಿಚಾರಕರಿಗೆ ತಿಳಿಸಬೇಕೆಂದರೆ ಅವರು ತಿಂಗಳಿಗೊಮ್ಮೆ ಬರುತ್ತಾರೆ. ಕಷ್ಟ ಯಾರ ಮುಂದೆ ಹೇಳಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಸತಿ ನಿಲಯದಲ್ಲಿ ಜಿಮ್ ಸಾಮಗ್ರಿಗಳು ಇದ್ದರೂ, ಇಲ್ಲದಂತಾಗಿದೆ. ವ್ಯವಸ್ಥಿತ ಗ್ರಂಥಾಲಯ ಸೌಲಭ್ಯವು ಇಲ್ಲ. ಶೌಚಾಲಯಗಳು ಶುಚಿತ್ವದಿಂದ ಕೂಡಿಲ್ಲ ಈ ಕುರಿತು ಮೇಲ್ವಿಚಾರಕ ಹನುಮಂತರಾಯ ಇವರಿಗೆ ಮನವರಿಕೆ ಮಾಡಿದರೂ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೇಳದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ದೂರಿದರು.</p>.<p>ಕೂಡಲೇ ವಸತಿ ನಿಲಯಕ್ಕೆ ಅಗತ್ಯ ಸೌಲಭ್ಯಗಳು ಒದಗಿಸುವಂತೆ ಒತ್ತಾಯಿಸಿದರು.</p>.<p>ವಿದ್ಯಾರ್ಥಿಗಳಾದ ರಾಮಲಿಂಗ, ಕರುಣಾಕರ, ಲೋಕೇಶ, ಪಾಲರಾಜ, ರಾಜು, ದೇವರಾಜ, ಶಿವರಾಜ, ಹನುಮೇಶ, ಸಂಜೀವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಕಳಪೆ ಮಟ್ಟದ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯದಲ್ಲಿಬುಧವಾರ ವಿದ್ಯಾರ್ಥಿಗಳು ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಹುಳು ಮಿಶ್ರಿತ ಆಹಾರ ನೀಡುತ್ತಿದ್ದಾರೆ. ಇಂತಹ ಆಹಾರ ಸೇವಿಸಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮೇಲ್ವಿಚಾರಕರಿಗೆ ತಿಳಿಸಬೇಕೆಂದರೆ ಅವರು ತಿಂಗಳಿಗೊಮ್ಮೆ ಬರುತ್ತಾರೆ. ಕಷ್ಟ ಯಾರ ಮುಂದೆ ಹೇಳಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಸತಿ ನಿಲಯದಲ್ಲಿ ಜಿಮ್ ಸಾಮಗ್ರಿಗಳು ಇದ್ದರೂ, ಇಲ್ಲದಂತಾಗಿದೆ. ವ್ಯವಸ್ಥಿತ ಗ್ರಂಥಾಲಯ ಸೌಲಭ್ಯವು ಇಲ್ಲ. ಶೌಚಾಲಯಗಳು ಶುಚಿತ್ವದಿಂದ ಕೂಡಿಲ್ಲ ಈ ಕುರಿತು ಮೇಲ್ವಿಚಾರಕ ಹನುಮಂತರಾಯ ಇವರಿಗೆ ಮನವರಿಕೆ ಮಾಡಿದರೂ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೇಳದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ದೂರಿದರು.</p>.<p>ಕೂಡಲೇ ವಸತಿ ನಿಲಯಕ್ಕೆ ಅಗತ್ಯ ಸೌಲಭ್ಯಗಳು ಒದಗಿಸುವಂತೆ ಒತ್ತಾಯಿಸಿದರು.</p>.<p>ವಿದ್ಯಾರ್ಥಿಗಳಾದ ರಾಮಲಿಂಗ, ಕರುಣಾಕರ, ಲೋಕೇಶ, ಪಾಲರಾಜ, ರಾಜು, ದೇವರಾಜ, ಶಿವರಾಜ, ಹನುಮೇಶ, ಸಂಜೀವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>