ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಕಾಂಗ್ರೆಸ್‌ ಮುಖಂಡರೊಂದಿಗೆ ಬೋಸರಾಜು, ಮುನಿಯಪ್ಪ ಚರ್ಚೆ

Published 30 ಏಪ್ರಿಲ್ 2024, 14:31 IST
Last Updated 30 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆ ನಿಮಿತ್ತ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಮುನಿಯಪ್ಪ ಅವರು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರೊಂದಿಗೆ ಚರ್ಚೆ ನಡೆಸಿದರು.

ರಾಯಚೂರಿನ ರಂಜಿತಾ ಹೋಟೆಲ್‌ನಲ್ಲಿ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಾಹಿತಿಯನ್ನು ಜನರಿಗೆ ತಲುಪಿಸುವೂದು ಸೇರಿ ಜಿ. ಕುಮಾರ ನಾಯಕ ಅವರ ಗೆಲುವಿನ ತಂತ್ರಗಾರಿಕೆಯ ಕುರಿತು ಮುಖಂಡರು ಚರ್ಚಿಸಿದರು.

ಎಐಸಿಸಿ ಸಹ ಉಸ್ತುವಾರಿ ಅಭಿಷೇಕ ದತ್ತು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮುಖಂಡರಾದ ಮೊಹಮ್ಮದ್ ಶಾಲಂ, ರಾಮಣ್ಣ ಹಾಗೂ ಯುವ ಮುಖಂಡ ರವಿ ಬೋಸರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT