<p><strong>ರಾಯಚೂರು:</strong> ‘ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುತ್ತಾರೆ’ ಎಂದು ಚಿಂತಕ ಶರಣ ಅಮರಗುಂಡಪ್ಪ ಹೂಗಾರ ಹೇಳಿದರು.</p>.<p>ಇಲ್ಲಿಯ ಬಸವ ಕೇಂದ್ರದಲ್ಲಿ, 12ನೇ ಶತಮಾನದ ಕಲ್ಯಾಣ ಕ್ರಾಂತಿಯ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಚಿಂತನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕ್ರಾಂತಿಯ ಸಮಯದಲ್ಲಿ ಮಾಚಿದೇವರು ಹೊತ್ತ ಜವಾಬ್ದಾರಿ ಅನುಪಮವಾದದ್ದು. ಶರಣ ಸಮೂಹವನ್ನು ರಕ್ಷಿಸಿ, ವಚನ ಸಾಹಿತ್ಯವನ್ನು ಉಳವಿಗೆ ತಲುಪಿಸಿದ ಮಹಾನ್ ದಂಡನಾಯಕನೇ ಮಾಚಿದೇವ’ ಎಂದು ತಿಳಿಸಿದರು.</p>.<p>‘12ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢನಂಬಿಕೆ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು’ ಎಂದು ಹೇಳಿದರು.</p>.<p>ಸುಮಂಗಲಮ್ಮ ಹಿರೇಮಠ, ಶರಣೆ ಲಕ್ಷ್ಮಿ ಪಟ್ಟಣಶೆಟ್ಟಿ, ಶರಣ ಬೆಟ್ಟಪ್ಪ ಕಸ್ತೂರಿ, ಬಸವರಾಜ ಕುರುಗೋಡು ಮತ್ತು ಶಿವಕುಮಾರ ಮಾಟೂರ್ ಚಿಂತನೆ ಮಾಡಿದರು.</p>.<p>ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು ಅಧ್ಯಕ್ಷತೆ ವಹಿಸಿದ್ದರು. ಚನ್ನಬಸವ ಸ್ವಾಗತಿಸಿದರು. ಚನ್ನಬಸವಣ್ಣ ಮಹಾಜನಶೆಟ್ಟಿ ನಿರೂಪಣೆ ಮಾಡಿದರು. ವೆಂಕಣ್ಣ ಆಶಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುತ್ತಾರೆ’ ಎಂದು ಚಿಂತಕ ಶರಣ ಅಮರಗುಂಡಪ್ಪ ಹೂಗಾರ ಹೇಳಿದರು.</p>.<p>ಇಲ್ಲಿಯ ಬಸವ ಕೇಂದ್ರದಲ್ಲಿ, 12ನೇ ಶತಮಾನದ ಕಲ್ಯಾಣ ಕ್ರಾಂತಿಯ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಚಿಂತನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕ್ರಾಂತಿಯ ಸಮಯದಲ್ಲಿ ಮಾಚಿದೇವರು ಹೊತ್ತ ಜವಾಬ್ದಾರಿ ಅನುಪಮವಾದದ್ದು. ಶರಣ ಸಮೂಹವನ್ನು ರಕ್ಷಿಸಿ, ವಚನ ಸಾಹಿತ್ಯವನ್ನು ಉಳವಿಗೆ ತಲುಪಿಸಿದ ಮಹಾನ್ ದಂಡನಾಯಕನೇ ಮಾಚಿದೇವ’ ಎಂದು ತಿಳಿಸಿದರು.</p>.<p>‘12ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢನಂಬಿಕೆ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು’ ಎಂದು ಹೇಳಿದರು.</p>.<p>ಸುಮಂಗಲಮ್ಮ ಹಿರೇಮಠ, ಶರಣೆ ಲಕ್ಷ್ಮಿ ಪಟ್ಟಣಶೆಟ್ಟಿ, ಶರಣ ಬೆಟ್ಟಪ್ಪ ಕಸ್ತೂರಿ, ಬಸವರಾಜ ಕುರುಗೋಡು ಮತ್ತು ಶಿವಕುಮಾರ ಮಾಟೂರ್ ಚಿಂತನೆ ಮಾಡಿದರು.</p>.<p>ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು ಅಧ್ಯಕ್ಷತೆ ವಹಿಸಿದ್ದರು. ಚನ್ನಬಸವ ಸ್ವಾಗತಿಸಿದರು. ಚನ್ನಬಸವಣ್ಣ ಮಹಾಜನಶೆಟ್ಟಿ ನಿರೂಪಣೆ ಮಾಡಿದರು. ವೆಂಕಣ್ಣ ಆಶಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>