<p><strong>ಕವಿತಾಳ</strong>: ‘ತಂದೆ–ತಾಯಿ ಸ್ಮರಣಾರ್ಥ ಸಾಮಾಜಿಕ ಕಾರ್ಯ ಮಾಡುತ್ತಿರುವ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಗಿರಿಜಾಪತಿ ಅವರ ಕಾರ್ಯ ಶ್ಲಾಘನೀಯ’ ಎಂದು ನಿವೃತ್ತ ಐಜಿಪಿ ಡಿ.ಸಿ.ರಾಜಪ್ಪ ಹೇಳಿದರು.</p>.<p>ಕಲಾವಿದ ಮಹಾಂತಯ್ಯ ಸ್ವಾಮಿ ಮುಂಡರಗಿಮಠ ಅವರ 22ನೇ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ಮಹಾಂತ ಕಲಾಭವನದಲ್ಲಿ ಶನಿವಾರ ನಡೆದ ಸಾಧಕರಿಗೆ ‘ಮಹಾಂತ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಹೃದಯವಂತಿಕೆ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂ.ಗಿರಿಜಾಪತಿ ಅವರ ಸಮಾಜಮುಖಿ ಕೆಲಸಗಳು ಗಮನ ಸೆಳೆಯುತ್ತಿವೆ’ ಎಂದರು.</p>.<p>ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ,‘ಕೌಟುಂಬಿಕ ಜೀವನದಲ್ಲಿ ಮಹತ್ವದ ಬದಲಾವಣೆ ಕಾಣುತ್ತಿರುವ ಪ್ರಸ್ತುತ ಕಾಲದಲ್ಲಿ ಸಾಮಾಜಿಕ ಜವಾಬ್ದಾರಿ ತೋರುತ್ತಿರುವ ಮುಂಡರಗಿಮಠ ಕುಟುಂಬದ ಸೇವೆ ಮುಂದಿನ ಪೀಳಿಗೆಗೆ ಮಾದರಿಯಾಗಿದೆ’ ಎಂದರು.</p>.<p>ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎಂ.ಗಿರಿಜಾಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಿವೃತ್ತ ಐಜಿಪಿ ಡಿ.ಸಿ.ರಾಜಪ್ಪ (ಸಾಹಿತ್ಯ), ಸಿದ್ದಲಿಂಗಯ್ಯ ವಿರಕ್ತಮಠ (ರಂಗಭೂಮಿ), ಅಯ್ಯಮ್ಮ ಯಡವಲ್ (ಸಂಗೀತ) ಅವರಿಗೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಜುನಾಥ ಗೋವಿಂದವಾಡ ಹಾಗೂ ಸೂಲಗಿತ್ತಿ ಮಲ್ಲಮ್ಮ ಅವರನ್ನು ಸನ್ಮಾನಿಸಲಾಯಿತು.</p>.<p>ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಅಮರೇಗೌಡ ವಕೀಲ, ಹನುಮನಗೌಡ ಬೆರಳಗುರ್ಕಿ, ಕೆ.ಎಂ.ವಿಶ್ವನಾಥ, ಜಗದೀಶ ಸಾಲಿಮಠ, ಎ.ಟಿ.ಪಾಟೀಲ, ಶಾಶ್ವತಯ್ಯಸ್ವಾಮಿ ಮುಕ್ಕುಂದಿಮಠ, ಶಿವಪ್ರಸಾದ, ಶಿವಶಂಕರ ವಕೀಲ ಇದ್ದರು.</p>.<p>ಆರೋಗ್ಯ ಉಚಿತ ತಪಾಸಣೆ ಶಿಬಿರ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ತಂದೆ–ತಾಯಿ ಸ್ಮರಣಾರ್ಥ ಸಾಮಾಜಿಕ ಕಾರ್ಯ ಮಾಡುತ್ತಿರುವ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಗಿರಿಜಾಪತಿ ಅವರ ಕಾರ್ಯ ಶ್ಲಾಘನೀಯ’ ಎಂದು ನಿವೃತ್ತ ಐಜಿಪಿ ಡಿ.ಸಿ.ರಾಜಪ್ಪ ಹೇಳಿದರು.</p>.<p>ಕಲಾವಿದ ಮಹಾಂತಯ್ಯ ಸ್ವಾಮಿ ಮುಂಡರಗಿಮಠ ಅವರ 22ನೇ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ಮಹಾಂತ ಕಲಾಭವನದಲ್ಲಿ ಶನಿವಾರ ನಡೆದ ಸಾಧಕರಿಗೆ ‘ಮಹಾಂತ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಹೃದಯವಂತಿಕೆ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂ.ಗಿರಿಜಾಪತಿ ಅವರ ಸಮಾಜಮುಖಿ ಕೆಲಸಗಳು ಗಮನ ಸೆಳೆಯುತ್ತಿವೆ’ ಎಂದರು.</p>.<p>ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ,‘ಕೌಟುಂಬಿಕ ಜೀವನದಲ್ಲಿ ಮಹತ್ವದ ಬದಲಾವಣೆ ಕಾಣುತ್ತಿರುವ ಪ್ರಸ್ತುತ ಕಾಲದಲ್ಲಿ ಸಾಮಾಜಿಕ ಜವಾಬ್ದಾರಿ ತೋರುತ್ತಿರುವ ಮುಂಡರಗಿಮಠ ಕುಟುಂಬದ ಸೇವೆ ಮುಂದಿನ ಪೀಳಿಗೆಗೆ ಮಾದರಿಯಾಗಿದೆ’ ಎಂದರು.</p>.<p>ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎಂ.ಗಿರಿಜಾಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಿವೃತ್ತ ಐಜಿಪಿ ಡಿ.ಸಿ.ರಾಜಪ್ಪ (ಸಾಹಿತ್ಯ), ಸಿದ್ದಲಿಂಗಯ್ಯ ವಿರಕ್ತಮಠ (ರಂಗಭೂಮಿ), ಅಯ್ಯಮ್ಮ ಯಡವಲ್ (ಸಂಗೀತ) ಅವರಿಗೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಜುನಾಥ ಗೋವಿಂದವಾಡ ಹಾಗೂ ಸೂಲಗಿತ್ತಿ ಮಲ್ಲಮ್ಮ ಅವರನ್ನು ಸನ್ಮಾನಿಸಲಾಯಿತು.</p>.<p>ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಅಮರೇಗೌಡ ವಕೀಲ, ಹನುಮನಗೌಡ ಬೆರಳಗುರ್ಕಿ, ಕೆ.ಎಂ.ವಿಶ್ವನಾಥ, ಜಗದೀಶ ಸಾಲಿಮಠ, ಎ.ಟಿ.ಪಾಟೀಲ, ಶಾಶ್ವತಯ್ಯಸ್ವಾಮಿ ಮುಕ್ಕುಂದಿಮಠ, ಶಿವಪ್ರಸಾದ, ಶಿವಶಂಕರ ವಕೀಲ ಇದ್ದರು.</p>.<p>ಆರೋಗ್ಯ ಉಚಿತ ತಪಾಸಣೆ ಶಿಬಿರ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>