<p><strong>ಹಟ್ಟಿ ಚಿನ್ನದ ಗಣಿ:</strong> ಅನ್ಫಿಟ್ ಯೋಜನೆ ಜಾರಿ ಮಾಡಬೇಕು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಮಹಾಂತೇಶ ಅವರು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಅವರಿಗೆ ಆಗ್ರಹಿಸಿದರು.</p>.<p>ಬೆಂಗಳೂರಿನಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ ಅಧ್ಯಕ್ಷ ಜಿ.ಟಿ.ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪಾ ಅವರೊಂದಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚಿಸಿದರು.</p>.<p>ಕಾರ್ಮಿಕರ ಮೆಡಿಕಲ್ ಅನ್ಫಿಟ್, ಮುಂಬಡ್ತಿ, ಖಾಲಿ ಹುದ್ದೆಗಳ ಭರ್ತಿ, ಬಾಕಿ ಇರುವ ಮನೆ ಬಾಡಿಗೆ ಭತ್ಯೆ, ಕ್ಯಾಂಟೀನ್ಗೆ ಮೂಲ ಸೌಕರ್ಯ ಒದಗಿಸುವುದು, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>‘ಮೂಲ ಸೌಕರ್ಯ ಒದಗಿಸುವ ಕುರಿತು ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಭರವಸೆ ನೀಡಿದ್ದಾರೆ’ ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಮಹಾಂತೇಶ ತಿಳಿಸಿದರು.</p>.<p>ಜುಲೈ 9ರಂದು ಹಟ್ಟಿಗೆ ಭೇಟಿ ನೀಡಿ ಸಭೆ ನಡೆಸಿ ಕಾರ್ಮಿಕ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ಸಿಐಟಿಯು ಮುಖಂಡ ರಮೇಶ ವೀರಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಅನ್ಫಿಟ್ ಯೋಜನೆ ಜಾರಿ ಮಾಡಬೇಕು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಮಹಾಂತೇಶ ಅವರು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಅವರಿಗೆ ಆಗ್ರಹಿಸಿದರು.</p>.<p>ಬೆಂಗಳೂರಿನಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ ಅಧ್ಯಕ್ಷ ಜಿ.ಟಿ.ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪಾ ಅವರೊಂದಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚಿಸಿದರು.</p>.<p>ಕಾರ್ಮಿಕರ ಮೆಡಿಕಲ್ ಅನ್ಫಿಟ್, ಮುಂಬಡ್ತಿ, ಖಾಲಿ ಹುದ್ದೆಗಳ ಭರ್ತಿ, ಬಾಕಿ ಇರುವ ಮನೆ ಬಾಡಿಗೆ ಭತ್ಯೆ, ಕ್ಯಾಂಟೀನ್ಗೆ ಮೂಲ ಸೌಕರ್ಯ ಒದಗಿಸುವುದು, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>‘ಮೂಲ ಸೌಕರ್ಯ ಒದಗಿಸುವ ಕುರಿತು ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಭರವಸೆ ನೀಡಿದ್ದಾರೆ’ ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಮಹಾಂತೇಶ ತಿಳಿಸಿದರು.</p>.<p>ಜುಲೈ 9ರಂದು ಹಟ್ಟಿಗೆ ಭೇಟಿ ನೀಡಿ ಸಭೆ ನಡೆಸಿ ಕಾರ್ಮಿಕ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ಸಿಐಟಿಯು ಮುಖಂಡ ರಮೇಶ ವೀರಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>