<p>ರಾಯಚೂರು: ಸ್ವಾಭಿಮಾನ ಮತ್ತು ದೇಶಭಕ್ತಿ ವಿಷಯಗಳಲ್ಲಿ ರಜಪೂತ ಸಮಾಜ ಇತರೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಬಣ್ಣಿಸಿದರು.</p>.<p>ನಗರದ ಉದಾಸಿ ಮಠದಲ್ಲಿ ಜಿಲ್ಲಾ ರಜಪೂತ ಸಮಾಜದಿಂದ ಭಾನುವಾರ ಸಂಜೆ ಏರ್ಪಡಿಸಿದ್ದ ಮಹಾರಾಣಾ ಪ್ರತಾಪ ಸಿಂಗ್ ಅವರ 482ನೇ ಶ್ರೀಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಸ್ವಾತಂತ್ರ್ಯ ಪೂರ್ವ ಮತ್ತು ನಂತರ ರಾಜಕಾರಣದಲ್ಲಿ ರಜಪೂತ ಕೊಡುಗೆ ಅಪಾರವಾಗಿದೆ. ದೇಶದ ರಕ್ಷಣೆಯಲ್ಲಿ ರಜಪೂತ ಸಮಾಜ ಮುಂಚೂಣಿಯಲ್ಲಿದೆ ಎಂದು ಹೇಳಿದರು.</p>.<p>ಉತ್ತರಭಾಗದಲ್ಲಿ ಅತ್ಯಂತ ಪ್ರಬಲ ಸಮುದಾಯವಾಗಿರುವ ರಜಪೂತರು ಇಂದು ದೇಶದ ಎಲ್ಲಾ ಭಾಗಗಳಲ್ಲಿ ಕಾಣಬಹುದು. ಸಮಾಜದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಡಾ. ಶಿವರಾಜ ಪಾಟೀಲ,ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಮಾತನಾಡಿದರು. ಮಹಾರಾಣಾ ಪ್ರತಾಪಸಿಂಗ್ ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು. ರಾಜಪುತ್ ಅಭಿವೃದ್ಧಿ ನಿಗಮ ಸ್ಸಾಪಿಸಬೇಕು. ವಿವಿಧ ನಿಗಮ ಮಂಡಳಿಗಳಿಗೆ ಸಮಾಜದವರನ್ನು ನಾಮ ನಿರ್ದೇಶನ ಮಾಡಬೇಕು ಹಾಗೂ ರಾಜಪುತ ಸಮಾಜದ ಸಭಾಭವನ ನಿರ್ಮಾಣಕ್ಕೆ ₹1 ಕೋಟಿ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಾಸಕರ ಹಾಗೂ ಸಂಸದ ಅನುದಾನ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ಮಾಡಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.</p>.<p>ಸಮಾಜದ ಅಧ್ಯಕ್ಷ ಗೋಪಾಲ ಸಿಂಗ್ ಮಾತನಾಡಿದರು. ಉಪಾಧ್ಯಕ್ಷ ಪ್ರೀತಮಸಿಂಗ್, ಶಿವಶಂಕರ ಸಿಂಗ್, ಪ್ರೇಮಪ್ರಸಾದ ಶುಕ್ಲಾ, ಆರ್ಎಪಿಸಿಎಂಎಸ್ ಅಧ್ಯಕ್ಷ ಜಯವಂತರಾವ್ ಪತಂಗೆ ಇದ್ದರು.</p>.<p>ನಿಹಾರಿಕಾ ಪ್ರಾರ್ಥಿಸಿದರು. ಬಿ.ವೆಂಕಟಸಿಂಗ್ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡ ಕೆ.ಶಾಂತಪ್ಪ, ಜಿ. ಶಿವಮೂರ್ತಿ, ಜಯಣ್ಣ, ಬಿಜೆಪಿ ಮುಖಂಡ ಕಡಗೋಳ ಆಂಜನೇಯ, ರವಿ ಜಲ್ದಾರ್, ನರಸಿಂಹರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಸ್ವಾಭಿಮಾನ ಮತ್ತು ದೇಶಭಕ್ತಿ ವಿಷಯಗಳಲ್ಲಿ ರಜಪೂತ ಸಮಾಜ ಇತರೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಬಣ್ಣಿಸಿದರು.</p>.<p>ನಗರದ ಉದಾಸಿ ಮಠದಲ್ಲಿ ಜಿಲ್ಲಾ ರಜಪೂತ ಸಮಾಜದಿಂದ ಭಾನುವಾರ ಸಂಜೆ ಏರ್ಪಡಿಸಿದ್ದ ಮಹಾರಾಣಾ ಪ್ರತಾಪ ಸಿಂಗ್ ಅವರ 482ನೇ ಶ್ರೀಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಸ್ವಾತಂತ್ರ್ಯ ಪೂರ್ವ ಮತ್ತು ನಂತರ ರಾಜಕಾರಣದಲ್ಲಿ ರಜಪೂತ ಕೊಡುಗೆ ಅಪಾರವಾಗಿದೆ. ದೇಶದ ರಕ್ಷಣೆಯಲ್ಲಿ ರಜಪೂತ ಸಮಾಜ ಮುಂಚೂಣಿಯಲ್ಲಿದೆ ಎಂದು ಹೇಳಿದರು.</p>.<p>ಉತ್ತರಭಾಗದಲ್ಲಿ ಅತ್ಯಂತ ಪ್ರಬಲ ಸಮುದಾಯವಾಗಿರುವ ರಜಪೂತರು ಇಂದು ದೇಶದ ಎಲ್ಲಾ ಭಾಗಗಳಲ್ಲಿ ಕಾಣಬಹುದು. ಸಮಾಜದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಡಾ. ಶಿವರಾಜ ಪಾಟೀಲ,ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಮಾತನಾಡಿದರು. ಮಹಾರಾಣಾ ಪ್ರತಾಪಸಿಂಗ್ ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು. ರಾಜಪುತ್ ಅಭಿವೃದ್ಧಿ ನಿಗಮ ಸ್ಸಾಪಿಸಬೇಕು. ವಿವಿಧ ನಿಗಮ ಮಂಡಳಿಗಳಿಗೆ ಸಮಾಜದವರನ್ನು ನಾಮ ನಿರ್ದೇಶನ ಮಾಡಬೇಕು ಹಾಗೂ ರಾಜಪುತ ಸಮಾಜದ ಸಭಾಭವನ ನಿರ್ಮಾಣಕ್ಕೆ ₹1 ಕೋಟಿ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಾಸಕರ ಹಾಗೂ ಸಂಸದ ಅನುದಾನ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ಮಾಡಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.</p>.<p>ಸಮಾಜದ ಅಧ್ಯಕ್ಷ ಗೋಪಾಲ ಸಿಂಗ್ ಮಾತನಾಡಿದರು. ಉಪಾಧ್ಯಕ್ಷ ಪ್ರೀತಮಸಿಂಗ್, ಶಿವಶಂಕರ ಸಿಂಗ್, ಪ್ರೇಮಪ್ರಸಾದ ಶುಕ್ಲಾ, ಆರ್ಎಪಿಸಿಎಂಎಸ್ ಅಧ್ಯಕ್ಷ ಜಯವಂತರಾವ್ ಪತಂಗೆ ಇದ್ದರು.</p>.<p>ನಿಹಾರಿಕಾ ಪ್ರಾರ್ಥಿಸಿದರು. ಬಿ.ವೆಂಕಟಸಿಂಗ್ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡ ಕೆ.ಶಾಂತಪ್ಪ, ಜಿ. ಶಿವಮೂರ್ತಿ, ಜಯಣ್ಣ, ಬಿಜೆಪಿ ಮುಖಂಡ ಕಡಗೋಳ ಆಂಜನೇಯ, ರವಿ ಜಲ್ದಾರ್, ನರಸಿಂಹರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>