ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಮಂತ್ರಾಲಯದಲ್ಲಿ ‌ಮಹಾರಥೋತ್ಸವ ಕಣ್ತುಂಬಿಕೊಂಡ ಭಕ್ತರು

Last Updated 25 ಆಗಸ್ಟ್ 2021, 9:53 IST
ಅಕ್ಷರ ಗಾತ್ರ

ಮಂತ್ರಾಲಯ: ಶ್ರೀರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವದ ಕೊನೆಯ ದಿನ ಬುಧವಾರ, ಮಹಾರಥೋತ್ಸವವು ಸಂಭ್ರಮದಿಂದ ನೆರವೇರಿತು.

ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಸುತ್ತಮುತ್ತಲಿನ ಗ್ರಾಮಗಳಿಂದ ಕುಟುಂಬ ಸಮೇತ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಬೆಳಗಿನ ಜಾವ ಉತ್ಸವ ರಾಯರ ಪಾದಪೂಜೆ ಬಳಿಕ, ಸಂಸ್ಕೃತ ವಿದ್ಯಾಪೀಠದಿಂದ ಮಠದವರೆಗೂ ವಾದ್ಯವೈಭವದೊಂದಿಗೆ ಮೆರವಣಿಗೆ ನಡೆಯಿತು. ಆನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಉತ್ಸವರಾಯರ ಮುಂದೆ ಬಣ್ಣ ಎರಚಿ ವಸಂತೋತ್ಸವ ಆಚರಿಸಿದರು. ಉತ್ಸವಮೂರ್ತಿಯನ್ನು ಮಹಾರಥೋತ್ಸವದಲ್ಲಿ ಇರಿಸಿದ ಬಳಿಕ, ಶ್ರೀಗಳು ಅನುಗ್ರಹ ಸಂದೇಶ ನೀಡಿದರು. ಆನಂತರ ರಥೋತ್ಸವ ನಡೆಯಿತು.

ಭಜನೆ, ಕೋಲಾಟ, ಬಹಿರೂಪಿ, ಜಾಂಜ್ ಪತಾಕ್, ಚಂಡಿವಾದ್ಯ, ಡೊಳ್ಳು ಕುಣಿತ, ಕರಗ ಕುಣಿತ ಕಲಾಗಿದರು ರಥೋತ್ಸವದ ಎದುರು ಕಲೆ ಪ್ರದರ್ಶನ ಮಾಡುತ್ತಾ ಸಾಗಿದ್ದು ವಿಶೇಷವಾಗಿತ್ತು. ಶ್ರೀಗಳು ಹೆಲಿಕಾಪ್ಟರ್ ಮೂಲಕ ರಥೋತ್ಸವದ ಪುಷ್ಪವೃಷ್ಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT