<p><strong>ಕವಿತಾಳ:</strong> ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಹಾಲಾಪುರ ಗ್ರಾಮದ ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ ಸುಗ್ಗಿ ಉತ್ಸವ ಆಚರಿಸಲಾಯಿತು.</p>.<p>ಜಂಗಮರಹಳ್ಳಿಯ ದಂಡಗುಂಡಪ್ಪ ತಾತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ನಾಡಿನ ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಆಚರಣೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಹತ್ವ ಪಡೆದಿವೆ. ಆಧುನಿಕ ಕಾಲದಲ್ಲಿ ಗ್ರಾಮೀಣ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಅಗತ್ಯ’ ಎಂದರು.</p>.<p>ಹೊರಳು, ಒನಕೆ, ಬಿದಿರಿನ ಪುಟ್ಟಿ, ಬೀಸುವ ಕಲ್ಲು, ಶ್ಯಾವಿಗೆ ಮಣಿ, ಮತ್ತಿತರ ಮನೆ ಬಳಕೆ ವಸ್ತುಗಳಿಗೆ ಕಬ್ಬು, ತೋರಣಗಳಿಂದ ಅಲಂಕರಿಸಿ ಬತ್ತದ ರಾಶಿ ಮಾಡುವ ಮೂಲಕ ರೈತರ ಬದುಕಿನ ಅನಾವರಣ ಮಾಡಲಾಯಿತು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಮುಖ್ಯಶಿಕ್ಷಕ ರವಿಕುಮಾರ ತೋರಣದಿನ್ನಿ, ಸಂಸ್ಥೆಯ ಉಪಾಧ್ಯಕ್ಷ ಕೆ.ಶೇಖರಪ್ಪ, ಕಾರ್ಯದರ್ಶಿ ಸಿದ್ದು, ಮುಖಂಡರಾದ ಕೃಷ್ಣಕುಮಾರ, ಕುಪ್ಪಣ್ಣ, ದೇವೇಂದ್ರ ಕುಮಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಹಾಲಾಪುರ ಗ್ರಾಮದ ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ ಸುಗ್ಗಿ ಉತ್ಸವ ಆಚರಿಸಲಾಯಿತು.</p>.<p>ಜಂಗಮರಹಳ್ಳಿಯ ದಂಡಗುಂಡಪ್ಪ ತಾತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ನಾಡಿನ ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಆಚರಣೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಹತ್ವ ಪಡೆದಿವೆ. ಆಧುನಿಕ ಕಾಲದಲ್ಲಿ ಗ್ರಾಮೀಣ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಅಗತ್ಯ’ ಎಂದರು.</p>.<p>ಹೊರಳು, ಒನಕೆ, ಬಿದಿರಿನ ಪುಟ್ಟಿ, ಬೀಸುವ ಕಲ್ಲು, ಶ್ಯಾವಿಗೆ ಮಣಿ, ಮತ್ತಿತರ ಮನೆ ಬಳಕೆ ವಸ್ತುಗಳಿಗೆ ಕಬ್ಬು, ತೋರಣಗಳಿಂದ ಅಲಂಕರಿಸಿ ಬತ್ತದ ರಾಶಿ ಮಾಡುವ ಮೂಲಕ ರೈತರ ಬದುಕಿನ ಅನಾವರಣ ಮಾಡಲಾಯಿತು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ಮುಖ್ಯಶಿಕ್ಷಕ ರವಿಕುಮಾರ ತೋರಣದಿನ್ನಿ, ಸಂಸ್ಥೆಯ ಉಪಾಧ್ಯಕ್ಷ ಕೆ.ಶೇಖರಪ್ಪ, ಕಾರ್ಯದರ್ಶಿ ಸಿದ್ದು, ಮುಖಂಡರಾದ ಕೃಷ್ಣಕುಮಾರ, ಕುಪ್ಪಣ್ಣ, ದೇವೇಂದ್ರ ಕುಮಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>