<p><strong>ಕವಿತಾಳ</strong>: ಸಮೀಪದ ಮಲ್ಲದಗುಡ್ಡ ಗ್ರಾಮದ ಹಳೆ ಶಾಲೆ ಪಕ್ಕದಲ್ಲಿ ಹಾದು ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.</p>.<p>ಈಚೆಗೆ ಸುರಿದ ಸತತ ಮಳೆಯಿಂದ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿದೆ. ಜಮೀನುಗಳಿಗೆ ಹೋಗುವ ರೈತರು, ಕೂಲಿ ಕಾರ್ಮಿಕರು ಮತ್ತು ನರೇಗಾ ಕೆಲಸಕ್ಕೆ ಹೋಗುವ ಕೆಲಸಗಾರರು ನಿತ್ಯ ಕೆಸರಿನಲ್ಲಿಯೇ ನಡೆದು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.</p>.<p>‘ಸ್ವಲ್ಪ ಮಳೆಯಾದರೂ ರಸ್ತೆ ಕೆಸರುಮಯವಾಗುತ್ತದೆ. ಹೊಲಗಳಿಗೆ ಹೋಗುವ ರೈತರು, ಕೂಲಿಕಾರರಿಗೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆ ದುರಸ್ತಿ ಮಾಡಿಸುವಂತೆ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮದ ಶರಣಬಸವ ಆರೋಪಿಸಿದರು.</p>.<p>‘ಮಳೆಗಾಲದಲ್ಲಿ ಎತ್ತು, ದನ–ಕರುಗಳ ಓಡಾಟ, ಎತ್ತಿನ ಬಂಡಿ, ಕೃಷಿ ಯಂತ್ರಗಳನ್ನು ಸಾಗಿಸಲು ಮತ್ತು ಬೆಳೆದ ಬೆಳೆಗಳನ್ನು ಮನೆಗೆ ತರಲು ಪರದಾಡುವ ಪರಿಸ್ಥಿತಿ ಇದೆ. ರಸ್ತೆ ದುರಸ್ತಿ ಮಾಡಬೇಕು. ಈ ಬಗ್ಗೆ ಹಿರಿಯ ಅಧಿಕಾರಿಗಳು ಗಮನಹರಿಸಬೇಕು’ ಎಂದು ಗ್ರಾಮದ ಬಸವರಾಜ ಒತ್ತಾಯಿಸಿದರು.</p>.<p>ಹದಗೆಟ್ಟ ರಸ್ತೆಯಿಂದ ರೈತರ ಪರದಾಟ ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರಿಗೆ ಸಮಸ್ಯೆ ಹಲವು ವರ್ಷಗಳಿಂದ ಸಮಸ್ಯೆಗೆ ಸಿಗದ ಪರಿಹಾರ</p>.<p> <strong>ರಸ್ತೆಯಲ್ಲಿ ನೀರು ನಿಂತು ಕೆಸರಾದ ಪರಿಣಾಮ ಗಲೀಜು ಉಂಟಾಗಿದೆ. ಸುತ್ತಲಿನ ಓಣಿಗಳಲ್ಲಿ ಸೊಳ್ಳೆ ಕಾಟ ಹೆಚ್ಚಿ ರೋಗ ಹರಡುವ ಭೀತಿ ಕಾಡುತ್ತಿದೆ. ರಸ್ತೆಗೆ ಮುರಂ ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಬೇಕು </strong></p><p><strong>- ಯಲ್ಲಪ್ಪ ನಾಯಕ ಶರಣಬಸವ ಮಲ್ಲದಗುಡ್ಡ ಗ್ರಾಮಸ್ಥರು</strong> </p>.<p><strong>ಈ ಬಗ್ಗೆ ಸಾರ್ವಜನಿಕರು ದೂರು ನೀಡಿಲ್ಲ. ಪಂಚಾಯಿತಿ ಅನುದಾನದಲ್ಲಿ ರಸ್ತೆ ದುರಸ್ತಿ ಮಾಡುವುದು ಕಷ್ಟ. ಹೀಗಾಗಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು</strong></p><p><strong>-ಬಸಲಿಂಗಪ್ಪ ಪಿಡಿಒ ಮಲ್ಲದಗುಡ್ಡ ಗ್ರಾಮ ಪಂಚಾಯಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಸಮೀಪದ ಮಲ್ಲದಗುಡ್ಡ ಗ್ರಾಮದ ಹಳೆ ಶಾಲೆ ಪಕ್ಕದಲ್ಲಿ ಹಾದು ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.</p>.<p>ಈಚೆಗೆ ಸುರಿದ ಸತತ ಮಳೆಯಿಂದ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿದೆ. ಜಮೀನುಗಳಿಗೆ ಹೋಗುವ ರೈತರು, ಕೂಲಿ ಕಾರ್ಮಿಕರು ಮತ್ತು ನರೇಗಾ ಕೆಲಸಕ್ಕೆ ಹೋಗುವ ಕೆಲಸಗಾರರು ನಿತ್ಯ ಕೆಸರಿನಲ್ಲಿಯೇ ನಡೆದು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.</p>.<p>‘ಸ್ವಲ್ಪ ಮಳೆಯಾದರೂ ರಸ್ತೆ ಕೆಸರುಮಯವಾಗುತ್ತದೆ. ಹೊಲಗಳಿಗೆ ಹೋಗುವ ರೈತರು, ಕೂಲಿಕಾರರಿಗೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆ ದುರಸ್ತಿ ಮಾಡಿಸುವಂತೆ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮದ ಶರಣಬಸವ ಆರೋಪಿಸಿದರು.</p>.<p>‘ಮಳೆಗಾಲದಲ್ಲಿ ಎತ್ತು, ದನ–ಕರುಗಳ ಓಡಾಟ, ಎತ್ತಿನ ಬಂಡಿ, ಕೃಷಿ ಯಂತ್ರಗಳನ್ನು ಸಾಗಿಸಲು ಮತ್ತು ಬೆಳೆದ ಬೆಳೆಗಳನ್ನು ಮನೆಗೆ ತರಲು ಪರದಾಡುವ ಪರಿಸ್ಥಿತಿ ಇದೆ. ರಸ್ತೆ ದುರಸ್ತಿ ಮಾಡಬೇಕು. ಈ ಬಗ್ಗೆ ಹಿರಿಯ ಅಧಿಕಾರಿಗಳು ಗಮನಹರಿಸಬೇಕು’ ಎಂದು ಗ್ರಾಮದ ಬಸವರಾಜ ಒತ್ತಾಯಿಸಿದರು.</p>.<p>ಹದಗೆಟ್ಟ ರಸ್ತೆಯಿಂದ ರೈತರ ಪರದಾಟ ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರಿಗೆ ಸಮಸ್ಯೆ ಹಲವು ವರ್ಷಗಳಿಂದ ಸಮಸ್ಯೆಗೆ ಸಿಗದ ಪರಿಹಾರ</p>.<p> <strong>ರಸ್ತೆಯಲ್ಲಿ ನೀರು ನಿಂತು ಕೆಸರಾದ ಪರಿಣಾಮ ಗಲೀಜು ಉಂಟಾಗಿದೆ. ಸುತ್ತಲಿನ ಓಣಿಗಳಲ್ಲಿ ಸೊಳ್ಳೆ ಕಾಟ ಹೆಚ್ಚಿ ರೋಗ ಹರಡುವ ಭೀತಿ ಕಾಡುತ್ತಿದೆ. ರಸ್ತೆಗೆ ಮುರಂ ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಬೇಕು </strong></p><p><strong>- ಯಲ್ಲಪ್ಪ ನಾಯಕ ಶರಣಬಸವ ಮಲ್ಲದಗುಡ್ಡ ಗ್ರಾಮಸ್ಥರು</strong> </p>.<p><strong>ಈ ಬಗ್ಗೆ ಸಾರ್ವಜನಿಕರು ದೂರು ನೀಡಿಲ್ಲ. ಪಂಚಾಯಿತಿ ಅನುದಾನದಲ್ಲಿ ರಸ್ತೆ ದುರಸ್ತಿ ಮಾಡುವುದು ಕಷ್ಟ. ಹೀಗಾಗಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು</strong></p><p><strong>-ಬಸಲಿಂಗಪ್ಪ ಪಿಡಿಒ ಮಲ್ಲದಗುಡ್ಡ ಗ್ರಾಮ ಪಂಚಾಯಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>