<p><strong>ರಾಯಚೂರು:</strong> ಸಮಾಜದ ಅಂಕುಡೊಂಕು ತಿದ್ದಿದ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮರ ಆಚಾರ ಮತ್ತು ವಿಚಾರಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ಕನ್ನಡ ಜಾನಪದ ಪರಿಷತ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.</p>.<p>ರೆಡ್ಡಿ ಸಮಾಜಕ್ಕೆ ಮಲ್ಲಮ್ಮ ಬಂಗಾರದ ಕಡ್ಡಿಯಾಗಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ವೀರರಲ್ಲಿ ಒಬ್ಬರಾಗಿದ್ದಾರೆ. ಅವರ ದಾರಿಯಲ್ಲಿ ಜೀವನ ಸಾಗಿಸಿದರೆ ಸಾರ್ಥಕತೆ ದೊರೆಯಲಿದೆ ಎಂದರು.</p>.<p>ರಾಜ್ಯದಲ್ಲಿ ಮಾತ್ರವಲ್ಲದೇ ಅಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಸಮಾಜದವರು ನೆಲೆ ಕಂಡುಕೊಂಡಿದ್ದಾರೆ ಎಂದರು.</p>.<p>ತಹಶೀಲ್ದಾರ ಹಂಪಣ್ಣ, ರೆಡ್ಡಿ ಸಮಾಜದ ಮುಖಂಡರಾದ ಗಿರೀಶ ಪಾಟೀಲ್, ಬಸನಗೌಡ, ಮಲ್ಲಿಕಾರ್ಜುನ ಮೇಟಿ, ರೇಖಾ ಕೇಶವರೆಡ್ಡಿ, ಗುರುನಾಥ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಮಾಜದ ಅಂಕುಡೊಂಕು ತಿದ್ದಿದ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮರ ಆಚಾರ ಮತ್ತು ವಿಚಾರಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿವೆ ಎಂದು ಕನ್ನಡ ಜಾನಪದ ಪರಿಷತ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.</p>.<p>ರೆಡ್ಡಿ ಸಮಾಜಕ್ಕೆ ಮಲ್ಲಮ್ಮ ಬಂಗಾರದ ಕಡ್ಡಿಯಾಗಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ವೀರರಲ್ಲಿ ಒಬ್ಬರಾಗಿದ್ದಾರೆ. ಅವರ ದಾರಿಯಲ್ಲಿ ಜೀವನ ಸಾಗಿಸಿದರೆ ಸಾರ್ಥಕತೆ ದೊರೆಯಲಿದೆ ಎಂದರು.</p>.<p>ರಾಜ್ಯದಲ್ಲಿ ಮಾತ್ರವಲ್ಲದೇ ಅಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಹೇಮರೆಡ್ಡಿ ಮಲ್ಲಮ್ಮ ಸಮಾಜದವರು ನೆಲೆ ಕಂಡುಕೊಂಡಿದ್ದಾರೆ ಎಂದರು.</p>.<p>ತಹಶೀಲ್ದಾರ ಹಂಪಣ್ಣ, ರೆಡ್ಡಿ ಸಮಾಜದ ಮುಖಂಡರಾದ ಗಿರೀಶ ಪಾಟೀಲ್, ಬಸನಗೌಡ, ಮಲ್ಲಿಕಾರ್ಜುನ ಮೇಟಿ, ರೇಖಾ ಕೇಶವರೆಡ್ಡಿ, ಗುರುನಾಥ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>