‘ಶ್ರಾವಣಮಾಸದಲ್ಲಿ ಒಂದು ತಿಂಗಳು ಭಕ್ತರು ವಾಹನಗಳ ಮೇಲೆ ಮಲ್ಲಿಕಾರ್ಜುನನ ದರ್ಶನಕ್ಕೆ ಬೆಟ್ಟ ಹತ್ತುವುದು ವಾಡಿಕೆ. ನಿತ್ಯ ನೂರಾರು ವಾಹನಗಳು ಬೆಟ್ಟಕ್ಕೆ ತೆರಳುತ್ತಿದ್ದರಿಂದ ರಸ್ತೆಯ ಮೇಲೆ ಹಾಕಿರುವ ತಿಪ್ಪೆ, ಮಣ್ಣು, ಕಲ್ಲುಗಳಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಅಯ್ಯಪ್ಪ ಸ್ವಾಮಿ ಹಾಗೂ ಮಲ್ಲಿಕಾರ್ಜುನ ದೇವಸ್ಥಾನ ಇದ್ದುದ್ದರಿಂದ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ’ ಎಂದು ತಿಳಿಸಿದ್ದಾರೆ.