<p><strong>ಮಸ್ಕಿ</strong>: ‘ನಾವುಗಳು ಸಂಕುಚಿತ ಮನೋಭಾವದಿಂದ ಹೊರ ಬರಬೇಕಾಗಿದೆ’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮನೋಹರ ಮಸ್ಕಿ ಅಭಿಪ್ರಾಯಪಟ್ಟರು.</p>.<p>ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಎಂ. ಬಸವರಾಜ ಅವರ ದೊಡ್ಮನೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀಶೈಲಪ್ಪ ಹಾಗೂ ಈರಮ್ಮ ಮಸ್ಕಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶರಣರು ಮತ್ತು ದಾರ್ಶನಿಕರು ಸಾರಿದ ಸಮಾನತೆ–ಸೌಹಾರ್ದದ ಸಂದೇಶವನ್ನು ಇಂದಿನ ಸಮಾಜ ವಿಸ್ಮರಿಸುತ್ತಿರುವುದನ್ನು ವಿಷಾದಿಸಿದರು.</p>.<p>‘ಬಸವಣ್ಣ, ಗಾಂಧೀಜಿ ತತ್ವಗಳಿಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಪ್ರತಿ ನಾಗರಿಕನ ಹೊಣೆ. ಶರಣರು ಬೋಧಿಸಿದ ಮಾನವೀಯ ಮೌಲ್ಯಗಳನ್ನು ಜಾತಿ, ವರ್ಣದ ಚೌಕಟ್ಟಿನಲ್ಲಿ ಸಿಮಿತಗೊಳಿಸುವುದು ದೊಡ್ಡ ತಪ್ಪು’ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಮಸ್ಕಿ (ವಕೀಲ) ಮಾತನಾಡಿ, ಸುತ್ತೂರಿನ ದೇಶಿಕೇಂದ್ರ ಸ್ವಾಮೀಜಿ ಆರಂಭಿಸಿದ ಶರಣ ಸಾಹಿತ್ಯ ಪರಿಷತ್ತು ಇಂದು ದೇಶ–ವಿದೇಶಗಳಲ್ಲಿ ಶರಣರ ವಿಚಾರಧಾರೆಯನ್ನು ಪ್ರಚಾರ ಪಡಿಸುತ್ತಿದೆ’ ಎಂದರು.</p>.<p>ತಿಮ್ಮನೌಡ ಚಿಲ್ಕರಾಗಿ ವಿಶೇಷ ಉಪನ್ಯಾಸ ನೀಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶ ಸೌದ್ರಿ, ಮಹಾಮನೆ ಸಮಿತಿ ಅಧ್ಯಕ್ಷ ದುರಗಪ್ಪ ಮಾಸ್ತರ್, ಗುತ್ತಿಗೆದಾರ ಎಂ. ಪ್ರಭುದೇವ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.</p>.<p>ವಕೀಲ ಕಿರಣ ಪಿ. ಮಸ್ಕಿ ಪ್ರಾರ್ಥನೆ ಸಲ್ಲಿಸಿದರು. ಮೊಹಿತ್ ಮಸ್ಕಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ‘ನಾವುಗಳು ಸಂಕುಚಿತ ಮನೋಭಾವದಿಂದ ಹೊರ ಬರಬೇಕಾಗಿದೆ’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮನೋಹರ ಮಸ್ಕಿ ಅಭಿಪ್ರಾಯಪಟ್ಟರು.</p>.<p>ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಎಂ. ಬಸವರಾಜ ಅವರ ದೊಡ್ಮನೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀಶೈಲಪ್ಪ ಹಾಗೂ ಈರಮ್ಮ ಮಸ್ಕಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶರಣರು ಮತ್ತು ದಾರ್ಶನಿಕರು ಸಾರಿದ ಸಮಾನತೆ–ಸೌಹಾರ್ದದ ಸಂದೇಶವನ್ನು ಇಂದಿನ ಸಮಾಜ ವಿಸ್ಮರಿಸುತ್ತಿರುವುದನ್ನು ವಿಷಾದಿಸಿದರು.</p>.<p>‘ಬಸವಣ್ಣ, ಗಾಂಧೀಜಿ ತತ್ವಗಳಿಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಪ್ರತಿ ನಾಗರಿಕನ ಹೊಣೆ. ಶರಣರು ಬೋಧಿಸಿದ ಮಾನವೀಯ ಮೌಲ್ಯಗಳನ್ನು ಜಾತಿ, ವರ್ಣದ ಚೌಕಟ್ಟಿನಲ್ಲಿ ಸಿಮಿತಗೊಳಿಸುವುದು ದೊಡ್ಡ ತಪ್ಪು’ ಎಂದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಮಸ್ಕಿ (ವಕೀಲ) ಮಾತನಾಡಿ, ಸುತ್ತೂರಿನ ದೇಶಿಕೇಂದ್ರ ಸ್ವಾಮೀಜಿ ಆರಂಭಿಸಿದ ಶರಣ ಸಾಹಿತ್ಯ ಪರಿಷತ್ತು ಇಂದು ದೇಶ–ವಿದೇಶಗಳಲ್ಲಿ ಶರಣರ ವಿಚಾರಧಾರೆಯನ್ನು ಪ್ರಚಾರ ಪಡಿಸುತ್ತಿದೆ’ ಎಂದರು.</p>.<p>ತಿಮ್ಮನೌಡ ಚಿಲ್ಕರಾಗಿ ವಿಶೇಷ ಉಪನ್ಯಾಸ ನೀಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶ ಸೌದ್ರಿ, ಮಹಾಮನೆ ಸಮಿತಿ ಅಧ್ಯಕ್ಷ ದುರಗಪ್ಪ ಮಾಸ್ತರ್, ಗುತ್ತಿಗೆದಾರ ಎಂ. ಪ್ರಭುದೇವ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.</p>.<p>ವಕೀಲ ಕಿರಣ ಪಿ. ಮಸ್ಕಿ ಪ್ರಾರ್ಥನೆ ಸಲ್ಲಿಸಿದರು. ಮೊಹಿತ್ ಮಸ್ಕಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>