ರಾಯಚೂರು: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಿರುವ ಕಾರಣ ಮಂತ್ರಾ ಲಯದ ಶ್ರೀರಾಘವೇಂದ್ರಸ್ವಾಮಿ ಮಠ ದಲ್ಲಿ ಮೇ 1 ರಿಂದ ಭಕ್ತರ ದರ್ಶನ ಸ್ಥಗಿತಗೊಳಿಸಲಾಗಿದೆ. ಸ್ಥಳೀಯವಾಗಿ ಲಾಕ್ಡೌನ್ ವಿಧಿಸಿರುವುದರಿಂದ ಮುಂದಿನ ಆದೇಶದವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ತಿಳಿಸಿದ್ದಾರೆ. ಆದರೆ, ಮಠದಲ್ಲಿ ಪೂಜಾ ಕಾರ್ಯಗಳು ಎಂದಿನಂತೆ ನಡೆಯುತ್ತವೆ. ಪಂಚಾಮೃತ, ರಥೋತ್ಸವ ಸೇವೆಗಳಿರುತ್ತವೆ. ಆನ್ಲೈನ್ ಮೂಲಕ ಸೇವೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.