<p><strong>ರಾಯಚೂರು:</strong> ಮಂತ್ರಾಲಯದ ಸುಯತೀಂದ್ರ ತೀರ್ಥ ಕಾಲೊನಿಯಲ್ಲಿನ ಕಾರ್ಮಿಕರ ತಗಡಿನ ಶೆಡ್ನಲ್ಲಿ ಬುಧವಾರ ಮಧ್ಯಾಹ್ನ ಶಾರ್ಟ್ ಸರ್ಕಿಟ್ನಿಂದ ಮೂರು ಸಿಲಿಂಡರ್ ಸ್ಫೋಟಗೊಂಡಿವೆ.</p><p>ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ಶೆಡ್ನಲ್ಲಿದ್ದ ಕಾರ್ಮಿಕರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.</p><p>ಕಾರ್ಮಿಕರೆಲ್ಲರೂ ಕೆಲಸಕ್ಕೆ ಹೋಗಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.</p><p>ಕಾಲೊನಿಯಲ್ಲಿರುವ 12 ತಗಡಿನ ಶೆಡ್ಗಳ ಪೈಕಿ ಮೊದಲು ಒಂದು ಶೆಡ್ನಲ್ಲಿ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ನಂತರ ಇತರ ಶೆಡ್ಗಳಿಗೂ ವ್ಯಾಪಿಸಿ, 5 ಕೆಜಿಯ ಮೂರು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಶೆಡ್ನಲ್ಲಿದ್ದ 14 ಕೆಜಿಯ ಒಂದು ಸಿಲಿಂಡರ್ ಹೊರತೆಗೆದು ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ.</p><p>ಸ್ಥಳಕ್ಕೆ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಪರಿಶೀಲಿಸಿದರು. ಐದು ಶೆಡ್ಗಳಲ್ಲಿ ವಾಸವಾಗಿರುವ ಬಿಹಾರ ಮೂಲದ ಎಲ್ಲ 20 ಕಾರ್ಮಿಕರಿಗೆ ರೇಷನ್, ಅಗತ್ಯ ವಸ್ತುಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p><p>ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಂತ್ರಾಲಯದ ಸುಯತೀಂದ್ರ ತೀರ್ಥ ಕಾಲೊನಿಯಲ್ಲಿನ ಕಾರ್ಮಿಕರ ತಗಡಿನ ಶೆಡ್ನಲ್ಲಿ ಬುಧವಾರ ಮಧ್ಯಾಹ್ನ ಶಾರ್ಟ್ ಸರ್ಕಿಟ್ನಿಂದ ಮೂರು ಸಿಲಿಂಡರ್ ಸ್ಫೋಟಗೊಂಡಿವೆ.</p><p>ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ಶೆಡ್ನಲ್ಲಿದ್ದ ಕಾರ್ಮಿಕರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.</p><p>ಕಾರ್ಮಿಕರೆಲ್ಲರೂ ಕೆಲಸಕ್ಕೆ ಹೋಗಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.</p><p>ಕಾಲೊನಿಯಲ್ಲಿರುವ 12 ತಗಡಿನ ಶೆಡ್ಗಳ ಪೈಕಿ ಮೊದಲು ಒಂದು ಶೆಡ್ನಲ್ಲಿ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ನಂತರ ಇತರ ಶೆಡ್ಗಳಿಗೂ ವ್ಯಾಪಿಸಿ, 5 ಕೆಜಿಯ ಮೂರು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಶೆಡ್ನಲ್ಲಿದ್ದ 14 ಕೆಜಿಯ ಒಂದು ಸಿಲಿಂಡರ್ ಹೊರತೆಗೆದು ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ.</p><p>ಸ್ಥಳಕ್ಕೆ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಪರಿಶೀಲಿಸಿದರು. ಐದು ಶೆಡ್ಗಳಲ್ಲಿ ವಾಸವಾಗಿರುವ ಬಿಹಾರ ಮೂಲದ ಎಲ್ಲ 20 ಕಾರ್ಮಿಕರಿಗೆ ರೇಷನ್, ಅಗತ್ಯ ವಸ್ತುಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.</p><p>ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>