ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಮೂಲ ವೃಂದಾವನ ದರ್ಶನಾವಕಾಶವನ್ನು ಜುಲೈ 2 ರಂದು ನಿಗದಿಪಡಿಸಿರುವುದನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಠದ ಆಡಳಿತ ಕಚೇರಿಯ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ ವಿಸ್ತರಿಸಿಕೊಳ್ಳುತ್ತಿದ್ದು, ಕೆಲವು ರಾಜ್ಯಗಳಲ್ಲಿ ಇನ್ನೂ ಲಾಕ್ಡೌನ್ ಮುಂದುವರಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.