ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಮಂತ್ರಾಲಯ ಶ್ರೀ

Last Updated 22 ಮಾರ್ಚ್ 2020, 13:54 IST
ಅಕ್ಷರ ಗಾತ್ರ

ರಾಯಚೂರು: ’ಮಹಾಮಾರಿ ಕೊರೊನಾ ವೈರಸ್‌ ವಿರುದ್ಧ ಜನರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನು ಲೆಕ್ಕಿಸದೆ ವೈದ್ಯಕೀಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಎಲ್ಲ ವೈದ್ಯರು, ವೈದ್ಯ ಸಿಬ್ಬಂದಿಗೆ ಮಠದ ವತಿಯಿಂದ ಕೃತಜ್ಞತಾ ಪೂರ್ವಕ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು

ಶೀಘ್ರಗತಿಯಲ್ಲಿ ಎಲ್ಲ ಪ್ರಯತ್ನಗಳು ಫಲಿಸಲಿ. ಈ ಮಹಾವ್ಯಾಧಿಯು ಪ್ರತಿಯೊಂದು ಗ್ರಾಮ ಗ್ರಾಮದಿಂದ ಹಾಗೂ ವಿಶ್ವದಿಂದ ಪರಿಹಾರವಾಗಲಿ. ಎಲ್ಲರ ಜೀವನವೂ ಸುಖಮಯವಾಗಲಿ ಎಂದು ಭಗವಂತನದಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಅವರ ಕರೆಗೆ ಮೇರೆಗೆ ದೇಶದ ಪ್ರತಿಯೊಂದು ಭಾಗದಿಂದ ವೈದ್ಯೋಪಚಾರ ಮಾಡಿದವರಿಗೆ ಬೆಂಬಲ ವ್ಯಕ್ತಪಡಿಸಿ ಜನರು ಚಪ್ಪಾಳೆ ತಟ್ಟಿದ್ದಾರೆ. ಅದೇ ರೀತಿ ಮಠದಲ್ಲೂ ಕೂಡಾ ನಗಾರಿ ಮೊಳಗಿಸಿ, ವಾದ್ಯ ನುಡಿಸಿ, ಚಪ್ಪಾಳೆ ತಟ್ಟುವ ಮೂಲಕ ವೈದ್ಯೋಪಚಾರ ಮಾಡಿದವರಿಗೆ ಬೆಂಬಲ ಸೂಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT