<p><strong>ರಾಯಚೂರು</strong>: ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಪ್ರಯುಕ್ತ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಠದ ಆವರಣ ಸಾವಿರಾರು ಸಂಖ್ಯೆಯ ಭಕ್ತರಿಂದ ತುಂಬಿಕೊಂಡಿದೆ.</p><p>ಬೆಳಗಿನ ಜಾವ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಮಠದೊಳಗೆ ಬರಲು ಎಲ್ಲ ದ್ವಾರಗಳ ಮೂಲಕ ಅವಕಾಶ ಕಲ್ಪಿಸಲಾಗಿತ್ತು.</p><p>ಬಹುತೇಕ ಭಕ್ತರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ರಾಯರ ದರ್ಶನ ಪಡೆದರು. ಹೊಸ ವರ್ಷ ಶುಭವನ್ನೇ ತರಲಿ ಎಂದು ಪ್ರಾರ್ಥನೆ ಸಲ್ಲಿಸಿದರು. </p><p>ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ದಾವಣಗೆರೆಯಿಂದ ಬಂದಿದ್ದ ಭಕ್ತರಿಗೆ ಮಠದ ಕೊಠಡಿ ಲಭ್ಯವಾಗದೇ ತೊಂದರೆ ಅನುಭವಿಸಿದರು. ಕಿಕ್ಕಿರಿದ ಭಕ್ತರಿಂದಾಗಿ ಪ್ರಸಾದ ವಿತರಣೆ ವ್ಯವಸ್ಥೆಯಲ್ಲಿ ವ್ಯತ್ಯಯವಾಯಿತು.</p>.<p>ಭಕ್ತರು ರಾಯರ ದರ್ಶನ ಪಡೆದ ನಂತರ ಮ್ಯೂಸಿಯ ವೀಕ್ಷಣೆ ಮಾಡಿದರು. ಅನೇಕರು ಮಠದ ಆವರಣದಲ್ಲಿ ಕುಳಿತು ಉಪಾಹಾರ ಸೇವಿಸಿದರು. ಸೆಲ್ಫಿ ಹಾಗೂ ಫೋಟೊಗಳನ್ನು ಕ್ಲಿಕ್ಕಿಸಿಕೊಂಡರು. ತುಂಗಭದ್ರಾ ನದಿ ತಟದಲ್ಲೂ ಜನ ಜಂಗಳಿ ಇತ್ತು.</p><p>ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳು ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು. ಅನೇಕ ಭಕ್ತರು ತಮ್ಮ ಊರುಗಳಿಂದ ಖಾಸಗಿ ವಾಹನಗಳಲ್ಲಿ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಪ್ರಯುಕ್ತ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಠದ ಆವರಣ ಸಾವಿರಾರು ಸಂಖ್ಯೆಯ ಭಕ್ತರಿಂದ ತುಂಬಿಕೊಂಡಿದೆ.</p><p>ಬೆಳಗಿನ ಜಾವ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಮಠದೊಳಗೆ ಬರಲು ಎಲ್ಲ ದ್ವಾರಗಳ ಮೂಲಕ ಅವಕಾಶ ಕಲ್ಪಿಸಲಾಗಿತ್ತು.</p><p>ಬಹುತೇಕ ಭಕ್ತರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ರಾಯರ ದರ್ಶನ ಪಡೆದರು. ಹೊಸ ವರ್ಷ ಶುಭವನ್ನೇ ತರಲಿ ಎಂದು ಪ್ರಾರ್ಥನೆ ಸಲ್ಲಿಸಿದರು. </p><p>ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ದಾವಣಗೆರೆಯಿಂದ ಬಂದಿದ್ದ ಭಕ್ತರಿಗೆ ಮಠದ ಕೊಠಡಿ ಲಭ್ಯವಾಗದೇ ತೊಂದರೆ ಅನುಭವಿಸಿದರು. ಕಿಕ್ಕಿರಿದ ಭಕ್ತರಿಂದಾಗಿ ಪ್ರಸಾದ ವಿತರಣೆ ವ್ಯವಸ್ಥೆಯಲ್ಲಿ ವ್ಯತ್ಯಯವಾಯಿತು.</p>.<p>ಭಕ್ತರು ರಾಯರ ದರ್ಶನ ಪಡೆದ ನಂತರ ಮ್ಯೂಸಿಯ ವೀಕ್ಷಣೆ ಮಾಡಿದರು. ಅನೇಕರು ಮಠದ ಆವರಣದಲ್ಲಿ ಕುಳಿತು ಉಪಾಹಾರ ಸೇವಿಸಿದರು. ಸೆಲ್ಫಿ ಹಾಗೂ ಫೋಟೊಗಳನ್ನು ಕ್ಲಿಕ್ಕಿಸಿಕೊಂಡರು. ತುಂಗಭದ್ರಾ ನದಿ ತಟದಲ್ಲೂ ಜನ ಜಂಗಳಿ ಇತ್ತು.</p><p>ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳು ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು. ಅನೇಕ ಭಕ್ತರು ತಮ್ಮ ಊರುಗಳಿಂದ ಖಾಸಗಿ ವಾಹನಗಳಲ್ಲಿ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>