ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯ: ಮೃತ್ತಿಕಾ ಸಂಗ್ರಹಣ ಪೂಜೆ

Last Updated 24 ಜುಲೈ 2021, 11:56 IST
ಅಕ್ಷರ ಗಾತ್ರ

ರಾಯಚೂರು: ಆಷಾಢ ಶುದ್ಧ ಪೂರ್ಣಿಮೆ ದಿನದಂದು ಶನಿವಾರ, ಮಂತ್ರಾಲಯದಲ್ಲಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮೃತ್ತಿಕಾ ಸಂಗ್ರಹಣಾ ವಿಧಿವಿಧಾನಗಳನ್ನು ನೆರವೇರಿಸಿದರು.

ತುಂಗಭದ್ರಾ ನದಿಪಕ್ಕದಲ್ಲಿರುವ ತುಳಸಿವನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಶ್ರೀಗಳು, ತುಳಸಿಗಿಡದ ಕೆಳಗಿನ ಮೃತ್ತಿಕೆಯನ್ನು ಬೆಳ್ಳಿ ಪಾತ್ರೆಯಲ್ಲಿ ಸಂಗ್ರಹಿಸುವ ಕಾರ್ಯ ನೆರವೇರಿಸಿದರು.

ತುಳಸಿವನದಿಂದ ಮಠದವರೆಗೂ ಸುವರ್ಣ ಪಲ್ಲಕ್ಕಿಯಲ್ಲಿ ಮೃತ್ತಿಕೆಯನ್ನು ಮೆರವಣಿಗೆ ಮೂಲಕ ತರಲಾಯಿತು. ಆನಂತರ ಧಾರ್ಮಿಕ‌ ನಿಯಮಾನುಸಾರ ಮೃತ್ತಿಕೆಯನ್ನು ರಾಯರ ಮೂಲ ವೃಂದಾವನದ ಮೇಲೆ ಇರಿಸಲಾಯಿತು.
ಮಠದ ಸಿಬ್ಬಂದಿ ಹಾಗೂ ಭಕ್ತರು ಮೆರವಣಿಗೆಯಲ್ಲಿ ‌ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT