ಕಾಯಿ, ಕರ್ಪೂರ, ಹೂವು ಸಮರ್ಪಣೆ ಮಾಡಿ ರಾಯರಿಗೆ ನಮಿಸಿದರು. ಪ್ರಹ್ಲಾದ ಮಹಾರಾಜ ಅವತಾರದಲ್ಲಿ ರಾಯರು ರಥಾರೂಢರಾಗಿದ್ದರು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ರಥದ ಮೂಲಕ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.
ಮಂಡ್ಯ, ಮೈಸೂರು ಭಾಗದ ಪೂಜಾ ಕುಣಿತ, ಡೊಳ್ಳು ಕುಣಿತ ಹಾಗೂ ಪಟ ಕುಣಿತ ತಂಡಗಳು ಭಾಗವಹಿಸಿದ್ದವು. ವಾಧ್ಯವೈಭವ ವಿಶೇಷವಾಗಿತ್ತು. ಭಕ್ತರು ರಾಯರಿಗೆ ಘೋಷಣೆಗಳನ್ನು ಕೂಗಿದರು.