<p><strong>ರಾಯಚೂರು:</strong> ಮಂತ್ರಾಲಯದ ಶ್ರೀಮಠದಲ್ಲಿ ಶ್ರೀರಾಘವೇಂದ್ರ ಸ್ವಾಮಿ 349ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ದಿನದಂದು ಮಂಗಳವಾರ ಬೆಳಿಗ್ಗೆ ನೈರ್ಮಲ್ಯ ವಿಸರ್ಜನೆ, ಉತ್ಸವ ರಾಯರ ಮೂರ್ತಿಗೆ ಪಾದಪೂಜೆ ನಡೆಯಿತು. ಆರಾಧನೆ ಅಂಗವಾಗಿ ಪ್ರಹ್ಲಾದರಾಜರ ಮೂರ್ತಿಗೆ ವಿಶೇಷ ಪಂಚಾಮೃತಾಭಿಷೇಕ ಹಾಗೂ ಕನಕಾಭಿಷೇಕ ನಡೆಯಿತು.</p>.<p>ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರುಶ್ರೀಮೂಲರಾಮದೇವರ ಪೂಜೆ ಹಾಗೂ ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನಕ್ಕೆ ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿಯನ್ನು ನೆರವೇರಿಸಿದರು.</p>.<p>ಪ್ರತಿವರ್ಷವೂ ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವದಲ್ಲಿ ಪೂರ್ವರಾಧನೆ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ವರ್ಷ ಕೋವಿಡ್ ಆವರಿಸಿದ್ದರಿಂದ ಭಕ್ತರು ಮಠಕ್ಕೆ ಬರಲು ಅವಕಾಶ ನೀಡಿಲ್ಲ. ಸೊಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಮಾರ್ಗ ಸೂಚನೆಗಳ ಪ್ರಕಾರವೇ ಮಂತ್ರಾಲಯದಲ್ಲಿ ಮಹೋತ್ಸವ ನೆರವೇರುತ್ತಿದೆ.</p>.<p>ಪೂರ್ವಾರಾಧನೆಯ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ನೆರವೇರುತ್ತಿವೆ. ಮಂತ್ರಾಲಯ ವಾಹಿನಿಯಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಿರುವುದರಿಂದ ಭಕ್ತರು ಮನೆಗಳಲ್ಲಿಯೇ ಅಂತರ್ಜಾಲ ವ್ಯವಸ್ಥೆ ಮೂಲಕ ರಾಯರ ದರ್ಶನ ಪಡೆಯಲು ಸೂಚಿಸಲಾಗಿದೆ. ಶ್ರೀಮಠದ ಸಿಬ್ಬಂದಿ, ಪಂಡಿತರು, ವಿದ್ವಾಂಸರು ಮಾತ್ರ ಕಾರ್ಯಕ್ರಮದಲ್ಲಿ ಸೀಮಿತ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಂತ್ರಾಲಯದ ಶ್ರೀಮಠದಲ್ಲಿ ಶ್ರೀರಾಘವೇಂದ್ರ ಸ್ವಾಮಿ 349ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ದಿನದಂದು ಮಂಗಳವಾರ ಬೆಳಿಗ್ಗೆ ನೈರ್ಮಲ್ಯ ವಿಸರ್ಜನೆ, ಉತ್ಸವ ರಾಯರ ಮೂರ್ತಿಗೆ ಪಾದಪೂಜೆ ನಡೆಯಿತು. ಆರಾಧನೆ ಅಂಗವಾಗಿ ಪ್ರಹ್ಲಾದರಾಜರ ಮೂರ್ತಿಗೆ ವಿಶೇಷ ಪಂಚಾಮೃತಾಭಿಷೇಕ ಹಾಗೂ ಕನಕಾಭಿಷೇಕ ನಡೆಯಿತು.</p>.<p>ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರುಶ್ರೀಮೂಲರಾಮದೇವರ ಪೂಜೆ ಹಾಗೂ ರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನಕ್ಕೆ ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿಯನ್ನು ನೆರವೇರಿಸಿದರು.</p>.<p>ಪ್ರತಿವರ್ಷವೂ ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವದಲ್ಲಿ ಪೂರ್ವರಾಧನೆ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ವರ್ಷ ಕೋವಿಡ್ ಆವರಿಸಿದ್ದರಿಂದ ಭಕ್ತರು ಮಠಕ್ಕೆ ಬರಲು ಅವಕಾಶ ನೀಡಿಲ್ಲ. ಸೊಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಮಾರ್ಗ ಸೂಚನೆಗಳ ಪ್ರಕಾರವೇ ಮಂತ್ರಾಲಯದಲ್ಲಿ ಮಹೋತ್ಸವ ನೆರವೇರುತ್ತಿದೆ.</p>.<p>ಪೂರ್ವಾರಾಧನೆಯ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ನೆರವೇರುತ್ತಿವೆ. ಮಂತ್ರಾಲಯ ವಾಹಿನಿಯಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಿರುವುದರಿಂದ ಭಕ್ತರು ಮನೆಗಳಲ್ಲಿಯೇ ಅಂತರ್ಜಾಲ ವ್ಯವಸ್ಥೆ ಮೂಲಕ ರಾಯರ ದರ್ಶನ ಪಡೆಯಲು ಸೂಚಿಸಲಾಗಿದೆ. ಶ್ರೀಮಠದ ಸಿಬ್ಬಂದಿ, ಪಂಡಿತರು, ವಿದ್ವಾಂಸರು ಮಾತ್ರ ಕಾರ್ಯಕ್ರಮದಲ್ಲಿ ಸೀಮಿತ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>