ಬೆಳಿಗ್ಗೆಯಿಂದ ವಿಶೇಷ ಪೂಜಾ ವಿಧಿವಿಧಾನಗಳು ಆರಂಭವಾಗಿವೆ. ರಾಯರ ಮೂಲವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ನೆರವೇರಿಸಿದ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು, ನವರತ್ನ ಕವಚವನ್ನು ಸಮರ್ಪಿಸಿದರು. ವೃಂದಾವನಕ್ಕೆ ವಿಶೇಷ ಪುಷ್ಪಾಲಂಕಾರ, ವಸ್ತ್ರಾಲಂಕಾರ ಮಾಡಿದರು. ತಿರುಪತಿ ತಿರುಮಲದಿಂದ ತರಲಾಗಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಸನ್ನಿಧಿಗೆ ಇಡಲಾಯಿತು. ಆನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.