ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

351ನೇ ಆರಾಧನಾ ಮಹೋತ್ಸವ | ರಾಯರ ಮಧ್ಯಾರಾಧನೆ: ಸುವರ್ಣ ರಥೋತ್ಸವ

Last Updated 13 ಆಗಸ್ಟ್ 2022, 9:39 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಯವರ 351ನೇ ಆರಾಧನಾ ಮಹೋತ್ಸವ ಸಂಭ್ರಮದಿಂದ ನೆರವೇರುತ್ತಿದ್ದು, ನಾಲ್ಕನೇ ದಿನವಾದ ಶನಿವಾರ ನಡೆದ ಮಧ್ಯಾರಾಧನೆಯಲ್ಲಿ ದೇಶದ ವಿವಿಧೆಡೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಬೆಳಿಗ್ಗೆಯಿಂದ‌ ವಿಶೇಷ ಪೂಜಾ‌ ವಿಧಿವಿಧಾನಗಳು ಆರಂಭವಾಗಿವೆ. ರಾಯರ ಮೂಲವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ನೆರವೇರಿಸಿದ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು, ನವರತ್ನ ಕವಚವನ್ನು ಸಮರ್ಪಿಸಿದರು. ವೃಂದಾವನಕ್ಕೆ ವಿಶೇಷ ಪುಷ್ಪಾಲಂಕಾರ, ವಸ್ತ್ರಾಲಂಕಾರ ಮಾಡಿದರು. ತಿರುಪತಿ ತಿರುಮಲದಿಂದ ತರಲಾಗಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಸನ್ನಿಧಿಗೆ ಇಡಲಾಯಿತು. ಆನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.

ಮಧ್ಯಾರಾಧನೆ ನಿಮಿತ್ತ ಮಠದ ಪ್ರಾಕಾರದಲ್ಲಿ ಸುವರ್ಣ ರಥೋತ್ಸವ ವಿಶೇಷವಾಗಿತ್ತು. ಚಂಡಿವಾದ್ಯ ವೈಭವ ಹಾಗೂ ವೇದಮಂತ್ರ ಘೋಷಣೆಗಳೊಂದಿಗೆ ರಥೋತ್ಸವ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ರಾಯರಿಗೆ ಜಯ ಘೋಷಣೆಗಳನ್ನು ಕೂಗಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ರಾಯರ ಮಧ್ಯಾರಾಧನೆಯಲ್ಲಿ ಪಾಲ್ಗೊಂಡು, ದರ್ಶನ ಪಡೆದು ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT