<p>ಮಾನ್ವಿ: ‘ಸೆ.16ರಂದು ಪ್ರವಾದಿ ಮುಹಮ್ಮದ್ (ಸ) ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಮುಸ್ಲಿಂ ಯುವ ಸಮಾಜದ ಅಧ್ಯಕ್ಷ ಸೈಯದ್ ಸಜ್ಜಾದ್ ಹುಸೇನ್ ಮತವಾಲೆ ಹೇಳಿದರು.</p>.<p>ಶನಿವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.16 ರಂದು ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಈದ್ ಮಿಲಾದ್ ಎಂದು ಆಚರಿಸಲಾಗುತ್ತದೆ. ಅಂದು ಪಟ್ಟಣದ ಮಸ್ಜಿದ್.ಎ.ಹಸನೈನ್ನಿಂದ ಪುರಸಭೆ ಬಳಿಯ ಮಸಿದ್.ಎ.ಹಸನೈನ್ವರೆಗೂ ಮೆರವಣಿಗೆ ನಡೆಯುತ್ತದೆ. ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ವಿವಿಧ ಧರ್ಮಗಳ ಧರ್ಮಗುರುಗಳು, ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯನಾಯಕ ಮತ್ತಿತರ ಮುಖಂಡರು, ಪಟ್ಟಣದ ಸಾವಿರಾರು ಮುಸ್ಲಿಂ ಹಾಗೂ ಹಿಂದೂ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದರು.</p>.<p>ಮುಖಂಡರಾದ ಸೈಯದ್ ಯದುಲ್ಲಾ ಹುಸೇನಿ ಮತವಾಲೇ, ಸೈಯದ್ ಸಿರಾಜ್ ಖಾದ್ರಿ, ಸೈಯದ್ ಆರೀಫ್ ಖಾದ್ರಿ ಜಾಗಿರದಾರ್, ಸೈಯದ್ ಖಾಲಿದ್ ಖಾದ್ರಿ, ಸೈಯದ್ ಮಸೂದ್ ಹುಸೇನ್ ಮತವಾಲೇ, ಪಿ.ಜಾವೇದ್ ಆಶ್ರಫ್, ಜಾಕೀರ್ ಪಟೇಲ್, ಸುಭಾನ್ ಬೇಗ್ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ‘ಸೆ.16ರಂದು ಪ್ರವಾದಿ ಮುಹಮ್ಮದ್ (ಸ) ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಮುಸ್ಲಿಂ ಯುವ ಸಮಾಜದ ಅಧ್ಯಕ್ಷ ಸೈಯದ್ ಸಜ್ಜಾದ್ ಹುಸೇನ್ ಮತವಾಲೆ ಹೇಳಿದರು.</p>.<p>ಶನಿವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.16 ರಂದು ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಈದ್ ಮಿಲಾದ್ ಎಂದು ಆಚರಿಸಲಾಗುತ್ತದೆ. ಅಂದು ಪಟ್ಟಣದ ಮಸ್ಜಿದ್.ಎ.ಹಸನೈನ್ನಿಂದ ಪುರಸಭೆ ಬಳಿಯ ಮಸಿದ್.ಎ.ಹಸನೈನ್ವರೆಗೂ ಮೆರವಣಿಗೆ ನಡೆಯುತ್ತದೆ. ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ವಿವಿಧ ಧರ್ಮಗಳ ಧರ್ಮಗುರುಗಳು, ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯನಾಯಕ ಮತ್ತಿತರ ಮುಖಂಡರು, ಪಟ್ಟಣದ ಸಾವಿರಾರು ಮುಸ್ಲಿಂ ಹಾಗೂ ಹಿಂದೂ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದರು.</p>.<p>ಮುಖಂಡರಾದ ಸೈಯದ್ ಯದುಲ್ಲಾ ಹುಸೇನಿ ಮತವಾಲೇ, ಸೈಯದ್ ಸಿರಾಜ್ ಖಾದ್ರಿ, ಸೈಯದ್ ಆರೀಫ್ ಖಾದ್ರಿ ಜಾಗಿರದಾರ್, ಸೈಯದ್ ಖಾಲಿದ್ ಖಾದ್ರಿ, ಸೈಯದ್ ಮಸೂದ್ ಹುಸೇನ್ ಮತವಾಲೇ, ಪಿ.ಜಾವೇದ್ ಆಶ್ರಫ್, ಜಾಕೀರ್ ಪಟೇಲ್, ಸುಭಾನ್ ಬೇಗ್ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>