<p><strong>ಮಾನ್ವಿ: ‘</strong>ಪಟ್ಟಣದ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ ₹5.85ಕೋಟಿ ನಿವ್ವಳ ಲಾಭ ಗಳಿಸಿದೆ’ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಶಂಕರಗೌಡ ಎಸ್. ಪಾಟೀಲ ಹೇಳಿದರು.</p>.<p>ಭಾನುವಾರ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದ 22 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘22 ವರ್ಷಗಳ ಹಿಂದೆ ಕೇವಲ ₹6.21 ಲಕ್ಷ ಬಂಡವಾಳದಿಂದ ಆರಂಭವಾದ ಬಸವಶ್ರೀ ಸಹಕಾರ ಸಂಘ ಎಲ್ಲರ ಸಹಕಾರ ಹಾಗೂ ಉತ್ತಮ ಸೇವೆಯಿಂದಾಗಿ ನಿರಂತರವಾಗಿ ಲಾಭ ಗಳಿಸಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸಂಘದ ಸದಸ್ಯರಿಗೆ ಶೇ22 ರಷ್ಟು ಲಾಭಾಂಶ ನೀಡಲಾಗುವುದು’ ಎಂದು ತಿಳಿಸಿದರು.</p>.<p>ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿದಾರಾರ ಮಾತನಾಡಿ, ‘ಮನ, ಮನೆ ಹಾಗೂ ಮನಿ (ಹಣ) ಚೆನ್ನಾಗಿದ್ದರೆ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ’ ಎಂದರು.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರೇಶ ಎನ್. ಹೊಸೂರು ವಾರ್ಷಿಕ ವರದಿ ಮಂಡಿಸಿದರು.<br /> ಸಂಘದ 143 ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ತಲಾ ₹5 ಸಾವಿರ ನಗದು ಹಾಗೂ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<p>ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ಚಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಆರ್ಡಿಸಿಸಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಪಾಟೀಲ ತೋರಣದಿನ್ನಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲನಗೌಡ ನಕ್ಕುಂದಿ, ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದ ಎಲ್ಲಾ ಶಾಖೆಗಳ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: ‘</strong>ಪಟ್ಟಣದ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ ₹5.85ಕೋಟಿ ನಿವ್ವಳ ಲಾಭ ಗಳಿಸಿದೆ’ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಶಂಕರಗೌಡ ಎಸ್. ಪಾಟೀಲ ಹೇಳಿದರು.</p>.<p>ಭಾನುವಾರ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದ 22 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘22 ವರ್ಷಗಳ ಹಿಂದೆ ಕೇವಲ ₹6.21 ಲಕ್ಷ ಬಂಡವಾಳದಿಂದ ಆರಂಭವಾದ ಬಸವಶ್ರೀ ಸಹಕಾರ ಸಂಘ ಎಲ್ಲರ ಸಹಕಾರ ಹಾಗೂ ಉತ್ತಮ ಸೇವೆಯಿಂದಾಗಿ ನಿರಂತರವಾಗಿ ಲಾಭ ಗಳಿಸಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸಂಘದ ಸದಸ್ಯರಿಗೆ ಶೇ22 ರಷ್ಟು ಲಾಭಾಂಶ ನೀಡಲಾಗುವುದು’ ಎಂದು ತಿಳಿಸಿದರು.</p>.<p>ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿದಾರಾರ ಮಾತನಾಡಿ, ‘ಮನ, ಮನೆ ಹಾಗೂ ಮನಿ (ಹಣ) ಚೆನ್ನಾಗಿದ್ದರೆ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ’ ಎಂದರು.</p>.<p>ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರೇಶ ಎನ್. ಹೊಸೂರು ವಾರ್ಷಿಕ ವರದಿ ಮಂಡಿಸಿದರು.<br /> ಸಂಘದ 143 ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ತಲಾ ₹5 ಸಾವಿರ ನಗದು ಹಾಗೂ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<p>ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ಚಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಆರ್ಡಿಸಿಸಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಪಾಟೀಲ ತೋರಣದಿನ್ನಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲನಗೌಡ ನಕ್ಕುಂದಿ, ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದ ಎಲ್ಲಾ ಶಾಖೆಗಳ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>