<p><strong>ಮಾನ್ವಿ:</strong> ಪಟ್ಟಣದ ಕೆರೆ ಭರ್ತಿಯಾಗಿದ್ದರೂ ಪದೇ ಪದೇ ಒಡೆಯುವ ಪೈಪ್ಗಳು, ಆಮೆಗತಿಯಲ್ಲಿ ಸಾಗಿರುವ ಅಮೃತ-2 ಯೋಜನೆಯ ಹೊಸ ಪೈಪ್ಲೈನ್ ಕಾಮಗಾರಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಅಡ್ಡಿಯಾಗಿವೆ.</p>.<p>ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳಿವೆ. ಕಳೆದ ವಾರ ಕುಡಿಯುವ ನೀರಿನ ಸಮಸ್ಯೆ ವಿರೋಧಿಸಿ 2, 3, 18, 25 ಹಾಗೂ 26ನೇ ವಾರ್ಡ್ ನಿವಾಸಿಗಳು ನಮಾಜಗೇರಿ ಗುಡ್ಡದ ಕುಡಿಯುವ ನೀರಿನ ಟ್ಯಾಂಕ್ ಹತ್ತಿರ ಪ್ರತಿಭಟನೆ ನಡೆಸಿದ ಘಟನೆ ನಡೆದಿತ್ತು.</p>.<p>ಪಟ್ಟಣದ ಹೊರವಲಯದ ರಬ್ಬಣಕಲ್ ಪಂಪ್ಹೌಸ್ನಿಂದ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಪೈಪ್ಗಳು ಒಡೆಯುವುದು, ವಾಲ್ವ್ ಬಂದ್ ಆಗುವುದು, ಮೋಟಾರು ಸುಟ್ಟು ಹೋಗುವುದು ಹಲವು ವರ್ಷಗಳಿಂದಲೂ ಸಾಮಾನ್ಯವಾಗಿದ್ದರೂ ಪುರಸಭೆ ಅಧಿಕಾರಿಗಳು ಹಳೆಯ ಪೈಪ್ಗಳನ್ನು ಬದಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬುದು ಸ್ಥಳೀಯರ ದೂರು.</p>.<p>ಒಡೆದ ಪೈಪ್ ದುರಸ್ತಿಗೆ ಕನಿಷ್ಠ ನಾಲ್ಕು ದಿನ ಬೇಕಾಗುತ್ತದೆ. ಪ್ರಸ್ತುತ ಪಟ್ಟಣಕ್ಕೆ ನಾಲ್ಕು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಪೈಪ್ ಒಡೆದಾಗ ದುರಸ್ತಿ ಕಾರ್ಯ ಮುಗಿದು ಐದಾರು ದಿನಗಳ ನಂತರ ನೀರು ಹರಿಸಲಾಗುತ್ತದೆ ಎಂಬುದು ಕೆಲವು ವಾರ್ಡ್ ನಿವಾಸಿಗಳ ಆರೋಪ.</p>.<p>ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂರು ಬಾರಿ ವಿವಿಧೆಡೆ ಪೈಪ್ಗಳು ಒಡೆದು ಪಟ್ಟಣದ ಜನ ಸಮಸ್ಯೆ ಎದುರಿಸಿದ್ದಾರೆ. ನೀರು ಪೂರೈಕೆಯಲ್ಲಿನ ವ್ಯತ್ಯಯ ನಿರಂತರವಾಗಿರುವ ಕಾರಣ ಕೆಲವು ವಾರ್ಡ್ ಗಳಲ್ಲಿ ಸ್ಥಳೀಯರು ಖಾಸಗಿ ಟ್ಯಾಂಕರ್ಗಳನ್ನು ಅವಲಂಬಿಸುವಂತಾಗಿದೆ.</p>.<p>ಪಟ್ಟಣ ವ್ಯಾಪ್ತಿಯ ಜುಮ್ಮಲದೊಡ್ಡಿಯಲ್ಲಿ ಹೊಸ ಟ್ಯಾಂಕ್ ನಿರ್ಮಾಣ ಮಾಡಿ ಎಂಟು ವರ್ಷಗಳಾಗಿವೆ. ಈ ಟ್ಯಾಂಕ್ಗೆ ನೀರು ಸರಬರಾಜು ಮಾಡಿ ವಿವಿಧ ವಾರ್ಡ್ಗಳಿಗೆ ನೀರು ಪೂರೈಸುವ ವ್ಯವಸ್ಥೆಯೂ ಆಗಿಲ್ಲ.</p>.<p>ಪಟ್ಟಣದ 27ನೇ ವಾರ್ಡ್ನಲ್ಲಿ ಅಮೃತ-2 ಯೋಜನೆ ಅಡಿಯಲ್ಲಿ ರಸ್ತೆ ಬದಿಯಲ್ಲಿ ಕೈಗೊಂಡಿದ್ದ ಹೊಸ ಪೈಪ್ಲೈನ್ ಕಾಮಗಾರಿ ಹದಿನೈದು ದಿನಗಳಿಂದ ಸ್ಥಗಿತಗೊಂಡಿದೆ. ಇದರಿಂದ ನಮ್ಮ ವ್ಯಾಪಾರಕ್ಕೆ ತೊಂದರೆಯಾಗಿದೆ ಎಂದು ವ್ಯಾಪಾರಿ ಇರ್ಫಾನ್ ಭಾನುವಾರ ತಿಳಿಸಿದರು.</p>.<p>‘ಪಟ್ಟಣದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರುವ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡು ಕೆಲವು ವಾರ್ಡ್ಗಳಿಗೆ ಕುಡಿಯುವ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ’ ಎಂದು ಪುರಸಭೆ ಸಿಬ್ಬಂದಿ ಹೇಳುತ್ತಾರೆ.</p>.<p>ಪುರಸಭೆಯಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಕಾರಣ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಅವರು ಅಮೃತ-2 ಯೋಜನೆಯ ಪೈಪ್ಲೈನ್ ಕಾಮಗಾರಿ ಚುರುಕುಗೊಳಿಸಲು ಕ್ರಮ ಕೈಗೊಳ್ಳಬೇಕು. ಕೆಲವು ವಾರ್ಡ್ಗಳಲ್ಲಿ ಬತ್ತಿ ಹೋಗಿರುವ ಹಳೆಯ ಕೊಳವೆ ಬಾವಿಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳಬೇಕು.</p>.<p>ಎಲ್ಲ ವಾರ್ಡ್ಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎಂ.ಬಾಷಾ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-32-771466753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಪಟ್ಟಣದ ಕೆರೆ ಭರ್ತಿಯಾಗಿದ್ದರೂ ಪದೇ ಪದೇ ಒಡೆಯುವ ಪೈಪ್ಗಳು, ಆಮೆಗತಿಯಲ್ಲಿ ಸಾಗಿರುವ ಅಮೃತ-2 ಯೋಜನೆಯ ಹೊಸ ಪೈಪ್ಲೈನ್ ಕಾಮಗಾರಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಅಡ್ಡಿಯಾಗಿವೆ.</p>.<p>ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳಿವೆ. ಕಳೆದ ವಾರ ಕುಡಿಯುವ ನೀರಿನ ಸಮಸ್ಯೆ ವಿರೋಧಿಸಿ 2, 3, 18, 25 ಹಾಗೂ 26ನೇ ವಾರ್ಡ್ ನಿವಾಸಿಗಳು ನಮಾಜಗೇರಿ ಗುಡ್ಡದ ಕುಡಿಯುವ ನೀರಿನ ಟ್ಯಾಂಕ್ ಹತ್ತಿರ ಪ್ರತಿಭಟನೆ ನಡೆಸಿದ ಘಟನೆ ನಡೆದಿತ್ತು.</p>.<p>ಪಟ್ಟಣದ ಹೊರವಲಯದ ರಬ್ಬಣಕಲ್ ಪಂಪ್ಹೌಸ್ನಿಂದ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಪೈಪ್ಗಳು ಒಡೆಯುವುದು, ವಾಲ್ವ್ ಬಂದ್ ಆಗುವುದು, ಮೋಟಾರು ಸುಟ್ಟು ಹೋಗುವುದು ಹಲವು ವರ್ಷಗಳಿಂದಲೂ ಸಾಮಾನ್ಯವಾಗಿದ್ದರೂ ಪುರಸಭೆ ಅಧಿಕಾರಿಗಳು ಹಳೆಯ ಪೈಪ್ಗಳನ್ನು ಬದಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬುದು ಸ್ಥಳೀಯರ ದೂರು.</p>.<p>ಒಡೆದ ಪೈಪ್ ದುರಸ್ತಿಗೆ ಕನಿಷ್ಠ ನಾಲ್ಕು ದಿನ ಬೇಕಾಗುತ್ತದೆ. ಪ್ರಸ್ತುತ ಪಟ್ಟಣಕ್ಕೆ ನಾಲ್ಕು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಪೈಪ್ ಒಡೆದಾಗ ದುರಸ್ತಿ ಕಾರ್ಯ ಮುಗಿದು ಐದಾರು ದಿನಗಳ ನಂತರ ನೀರು ಹರಿಸಲಾಗುತ್ತದೆ ಎಂಬುದು ಕೆಲವು ವಾರ್ಡ್ ನಿವಾಸಿಗಳ ಆರೋಪ.</p>.<p>ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂರು ಬಾರಿ ವಿವಿಧೆಡೆ ಪೈಪ್ಗಳು ಒಡೆದು ಪಟ್ಟಣದ ಜನ ಸಮಸ್ಯೆ ಎದುರಿಸಿದ್ದಾರೆ. ನೀರು ಪೂರೈಕೆಯಲ್ಲಿನ ವ್ಯತ್ಯಯ ನಿರಂತರವಾಗಿರುವ ಕಾರಣ ಕೆಲವು ವಾರ್ಡ್ ಗಳಲ್ಲಿ ಸ್ಥಳೀಯರು ಖಾಸಗಿ ಟ್ಯಾಂಕರ್ಗಳನ್ನು ಅವಲಂಬಿಸುವಂತಾಗಿದೆ.</p>.<p>ಪಟ್ಟಣ ವ್ಯಾಪ್ತಿಯ ಜುಮ್ಮಲದೊಡ್ಡಿಯಲ್ಲಿ ಹೊಸ ಟ್ಯಾಂಕ್ ನಿರ್ಮಾಣ ಮಾಡಿ ಎಂಟು ವರ್ಷಗಳಾಗಿವೆ. ಈ ಟ್ಯಾಂಕ್ಗೆ ನೀರು ಸರಬರಾಜು ಮಾಡಿ ವಿವಿಧ ವಾರ್ಡ್ಗಳಿಗೆ ನೀರು ಪೂರೈಸುವ ವ್ಯವಸ್ಥೆಯೂ ಆಗಿಲ್ಲ.</p>.<p>ಪಟ್ಟಣದ 27ನೇ ವಾರ್ಡ್ನಲ್ಲಿ ಅಮೃತ-2 ಯೋಜನೆ ಅಡಿಯಲ್ಲಿ ರಸ್ತೆ ಬದಿಯಲ್ಲಿ ಕೈಗೊಂಡಿದ್ದ ಹೊಸ ಪೈಪ್ಲೈನ್ ಕಾಮಗಾರಿ ಹದಿನೈದು ದಿನಗಳಿಂದ ಸ್ಥಗಿತಗೊಂಡಿದೆ. ಇದರಿಂದ ನಮ್ಮ ವ್ಯಾಪಾರಕ್ಕೆ ತೊಂದರೆಯಾಗಿದೆ ಎಂದು ವ್ಯಾಪಾರಿ ಇರ್ಫಾನ್ ಭಾನುವಾರ ತಿಳಿಸಿದರು.</p>.<p>‘ಪಟ್ಟಣದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರುವ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡು ಕೆಲವು ವಾರ್ಡ್ಗಳಿಗೆ ಕುಡಿಯುವ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ’ ಎಂದು ಪುರಸಭೆ ಸಿಬ್ಬಂದಿ ಹೇಳುತ್ತಾರೆ.</p>.<p>ಪುರಸಭೆಯಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಕಾರಣ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಅವರು ಅಮೃತ-2 ಯೋಜನೆಯ ಪೈಪ್ಲೈನ್ ಕಾಮಗಾರಿ ಚುರುಕುಗೊಳಿಸಲು ಕ್ರಮ ಕೈಗೊಳ್ಳಬೇಕು. ಕೆಲವು ವಾರ್ಡ್ಗಳಲ್ಲಿ ಬತ್ತಿ ಹೋಗಿರುವ ಹಳೆಯ ಕೊಳವೆ ಬಾವಿಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳಬೇಕು.</p>.<p>ಎಲ್ಲ ವಾರ್ಡ್ಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎಂ.ಬಾಷಾ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-32-771466753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>