<p><strong>ಮಾನ್ವಿ:</strong> ‘ವಿಶ್ವಗುರು ಬಸವಣ್ಣನವರು ಪ್ರತಿಪಾದಿಸಿದ ಕಾಯಕ ಮತ್ತು ದಾಸೋಹ ತತ್ವಗಳು ಶ್ರೇಷ್ಠ ಮತ್ತು ಅನುಕರಣೀಯ’ ಎಂದು ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಬಿವಿಆರ್ ಶಾಲೆ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವೀರಶೈವ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ ಮಾತನಾಡಿ,‘ರಾಜ್ಯ ಸರ್ಕಾರ ವಿಶ್ವ ಗುರು ಬಸವಣ್ಣನವರಿಗೆ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿರುವ ಹಿನ್ನೆಲೆಯಲ್ಲಿ ಸೆ.5ರಂದು ರಾಯಚೂರಿನಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದು ಅಗತ್ಯ’ ಎಂದರು.</p>.<p>ಅಮರೇಶ್ವರಿ ಬೆಟ್ಟದೂರು, ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಮಲ್ಲಿಕಾರ್ಜುನ ಸಿರಗುಪ್ಪ ಮಾತನಾಡಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಚಿಮ್ಲಾಪುರ, ಬಸವ ಕೇಂದ್ರದ ಅಧ್ಯಕ್ಷ ರಂಗಪ್ಪ ಜಿ.ಎಂ, ಗೌರವಾಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು, ನಾಗರತ್ನಮ್ಮ ಬಿ.ಪಾಟೀಲ, ನಾಗರಾಜ ಬಳಿಗಾರ, ಶರಣಬಸವ ನೀರಮಾನ್ವಿ, ಶರಣಬಸವ ಬೆಟ್ಟದೂರು, ಸ್ಥಳೀಯ ಸಂಘ–ಸಂಸ್ಥೆಗಳ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ವಿಶ್ವಗುರು ಬಸವಣ್ಣನವರು ಪ್ರತಿಪಾದಿಸಿದ ಕಾಯಕ ಮತ್ತು ದಾಸೋಹ ತತ್ವಗಳು ಶ್ರೇಷ್ಠ ಮತ್ತು ಅನುಕರಣೀಯ’ ಎಂದು ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಬಿವಿಆರ್ ಶಾಲೆ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವೀರಶೈವ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ ಮಾತನಾಡಿ,‘ರಾಜ್ಯ ಸರ್ಕಾರ ವಿಶ್ವ ಗುರು ಬಸವಣ್ಣನವರಿಗೆ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿರುವ ಹಿನ್ನೆಲೆಯಲ್ಲಿ ಸೆ.5ರಂದು ರಾಯಚೂರಿನಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದು ಅಗತ್ಯ’ ಎಂದರು.</p>.<p>ಅಮರೇಶ್ವರಿ ಬೆಟ್ಟದೂರು, ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಮಲ್ಲಿಕಾರ್ಜುನ ಸಿರಗುಪ್ಪ ಮಾತನಾಡಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಚಿಮ್ಲಾಪುರ, ಬಸವ ಕೇಂದ್ರದ ಅಧ್ಯಕ್ಷ ರಂಗಪ್ಪ ಜಿ.ಎಂ, ಗೌರವಾಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು, ನಾಗರತ್ನಮ್ಮ ಬಿ.ಪಾಟೀಲ, ನಾಗರಾಜ ಬಳಿಗಾರ, ಶರಣಬಸವ ನೀರಮಾನ್ವಿ, ಶರಣಬಸವ ಬೆಟ್ಟದೂರು, ಸ್ಥಳೀಯ ಸಂಘ–ಸಂಸ್ಥೆಗಳ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>