<p>ಮಾನ್ವಿ: ‘ಶಾಂತಿ ಹಾಗೂ ಸಮಾನತೆಯ ತತ್ವಗಳನ್ನು ಬೋಧಿಸಿದ ಭಗವಾನ್ ಗೌತಮ ಬುದ್ಧರ ಸಂದೇಶಗಳನ್ನು ಮನೆ ಮನೆಗೆ ತಲುಪಿಸಿ, ಜಾಗೃತಿ ಮೂಡಿಸುವ ಕಾರ್ಯ ಅಗತ್ಯ’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗವಾನ್ ಬುದ್ಧರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಗವಾನ್ ಬುದ್ಧರು ಸಾರಿದ ಅಹಿಂಸೆ ಹಾಗೂ ಶಾಂತಿಯ ಸಂದೇಶಗಳು ಇಂದು ವಿಶ್ವದಲ್ಲಿನ ವಿವಿಧ ರಾಷ್ಡ್ರಗಳ ನಡುವೆ ನಡೆಯುತ್ತಿರುವ ಯುದ್ದದ ವಾತಾವರಣ ತಡೆಯಲು ಸೂಕ್ತ ಉತ್ತರವಾಗಿದೆ’ ಎಂದರು.</p>.<p>ಎಪಿಎಂಸಿ ಮಾಜಿ ನಿರ್ದೇಶಕ ಜಿ. ಶಿವರಾಜ ನಾಯಕ ಬಲ್ಲಟಗಿ ಮಾತನಾಡಿ,‘ಸತ್ಯ ಮತ್ತು ಆಹಿಂಸೆಯನ್ನು ಒಳಗೊಂಡ ಪಂಚಶೀಲ ತತ್ವಗಳನ್ನು ಗೌತಮ ಬುದ್ಧರು ನಮಗೆ ಬೋಧಿಸಿದ್ದಾರೆ. ಅವುಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳಬೇಕಾಗಿದೆ’ ಎಂದು ಹೇಳಿದರು.</p>.<p>ಶಿಕ್ಷಕಿ ಆಶ್ವಿನಿ ಸಂಗಮೇಶ ಅವರು ಗೌತಮ ಬುದ್ಧನ ಜೀವನ ಮತ್ತು ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.</p>.<p>ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ಪಿಐ ಸೋಮಶೇಖರ ಎಸ್.ಕೆಂಚರೆಡ್ಡಿ, ಕೃಷಿ ಅಧಿಕಾರಿ ಗುರುನಾಥ ಭೂಸನೂರ, ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಗೂ ಸಂಘ–ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-413419027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ‘ಶಾಂತಿ ಹಾಗೂ ಸಮಾನತೆಯ ತತ್ವಗಳನ್ನು ಬೋಧಿಸಿದ ಭಗವಾನ್ ಗೌತಮ ಬುದ್ಧರ ಸಂದೇಶಗಳನ್ನು ಮನೆ ಮನೆಗೆ ತಲುಪಿಸಿ, ಜಾಗೃತಿ ಮೂಡಿಸುವ ಕಾರ್ಯ ಅಗತ್ಯ’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗವಾನ್ ಬುದ್ಧರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಗವಾನ್ ಬುದ್ಧರು ಸಾರಿದ ಅಹಿಂಸೆ ಹಾಗೂ ಶಾಂತಿಯ ಸಂದೇಶಗಳು ಇಂದು ವಿಶ್ವದಲ್ಲಿನ ವಿವಿಧ ರಾಷ್ಡ್ರಗಳ ನಡುವೆ ನಡೆಯುತ್ತಿರುವ ಯುದ್ದದ ವಾತಾವರಣ ತಡೆಯಲು ಸೂಕ್ತ ಉತ್ತರವಾಗಿದೆ’ ಎಂದರು.</p>.<p>ಎಪಿಎಂಸಿ ಮಾಜಿ ನಿರ್ದೇಶಕ ಜಿ. ಶಿವರಾಜ ನಾಯಕ ಬಲ್ಲಟಗಿ ಮಾತನಾಡಿ,‘ಸತ್ಯ ಮತ್ತು ಆಹಿಂಸೆಯನ್ನು ಒಳಗೊಂಡ ಪಂಚಶೀಲ ತತ್ವಗಳನ್ನು ಗೌತಮ ಬುದ್ಧರು ನಮಗೆ ಬೋಧಿಸಿದ್ದಾರೆ. ಅವುಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳಬೇಕಾಗಿದೆ’ ಎಂದು ಹೇಳಿದರು.</p>.<p>ಶಿಕ್ಷಕಿ ಆಶ್ವಿನಿ ಸಂಗಮೇಶ ಅವರು ಗೌತಮ ಬುದ್ಧನ ಜೀವನ ಮತ್ತು ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.</p>.<p>ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ಪಿಐ ಸೋಮಶೇಖರ ಎಸ್.ಕೆಂಚರೆಡ್ಡಿ, ಕೃಷಿ ಅಧಿಕಾರಿ ಗುರುನಾಥ ಭೂಸನೂರ, ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಗೂ ಸಂಘ–ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-32-413419027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>