<p><strong>ಮಾನ್ವಿ</strong>: ತಾಲ್ಲೂಕಿನ ಜಾಗೀರಪನ್ನೂರು ಗ್ರಾಮದಲ್ಲಿ ಈಚೆಗೆ ಜೋಳದ ರಾಶಿ ಬೆಂಕಿಗಾಹುತಿಯಾದ ಜಮೀನಿಗೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಂಗಳವಾರ ಭೇಟಿ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತ ಯಂಕೋಬ ದಳಪತಿ 6 ಎಕರೆ ಜಮೀನಿನಲ್ಲಿ ಬೆಳೆದ ಜೋಳದ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿರುವ ಘಟನೆ ಬಗ್ಗೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು</p>.<p>ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ಶರಣಪ್ಪಗೌಡ ಮದ್ಲಾಪುರ, ಮುಖಂಡರಾದ ಬಾಷಾ ಸಾಬ್, ಪಿ .ರವಿಕುಮಾರ , ಯಲ್ಲಪ್ಪ ನಾಯಕ , ಸಂಗನಗೌಡ ಜಾಗೀರಪನ್ನೂರು, ವಿಜಯ್ ನಾಯಕ ಕೊಟ್ನೆಕಲ್, ಖಾಸಿಂ ಸಾಬ್ ಚಿಕಲಪರ್ವಿ, ಬಸವರಾಜ ಸ್ವಾಮಿ ಚೀಕಲಪರ್ವಿ, ಬಸವರಾಜ ಜಾಗೀರಪನ್ನೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ತಾಲ್ಲೂಕಿನ ಜಾಗೀರಪನ್ನೂರು ಗ್ರಾಮದಲ್ಲಿ ಈಚೆಗೆ ಜೋಳದ ರಾಶಿ ಬೆಂಕಿಗಾಹುತಿಯಾದ ಜಮೀನಿಗೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಂಗಳವಾರ ಭೇಟಿ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತ ಯಂಕೋಬ ದಳಪತಿ 6 ಎಕರೆ ಜಮೀನಿನಲ್ಲಿ ಬೆಳೆದ ಜೋಳದ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿರುವ ಘಟನೆ ಬಗ್ಗೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು</p>.<p>ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ಶರಣಪ್ಪಗೌಡ ಮದ್ಲಾಪುರ, ಮುಖಂಡರಾದ ಬಾಷಾ ಸಾಬ್, ಪಿ .ರವಿಕುಮಾರ , ಯಲ್ಲಪ್ಪ ನಾಯಕ , ಸಂಗನಗೌಡ ಜಾಗೀರಪನ್ನೂರು, ವಿಜಯ್ ನಾಯಕ ಕೊಟ್ನೆಕಲ್, ಖಾಸಿಂ ಸಾಬ್ ಚಿಕಲಪರ್ವಿ, ಬಸವರಾಜ ಸ್ವಾಮಿ ಚೀಕಲಪರ್ವಿ, ಬಸವರಾಜ ಜಾಗೀರಪನ್ನೂರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>