<p><strong>ಮಾನ್ವಿ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಪೋತ್ನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಖರಾಬದಿನ್ನಿ ಗ್ರಾಮದ ನೂರಾರು ನರೇಗಾ ಕೂಲಿ ಕಾರ್ಮಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಉದ್ಯೋಗ ಖಾತರಿ ನಿಯಮದಂತೆ ಶೇ50ರಷ್ಟು ಕೆಲಸ ಮಾಡಿದರೂ ಪೂರ್ಣಗೊಂಡ ಕೆಲಸದ ಶೇ100ರಷ್ಟು ಕೂಲಿ ನೀಡಬೇಕು. ಆದರೆ, ಅಧಿಕಾರಿಗಳು ಕಡಿಮೆ ಮೊತ್ತದ ಕೂಲಿ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಸವರಾಜ ಕೂಲಿಕಾರ್ಮಿಕರಿಂದ ಮನವಿ ಸ್ವೀಕರಿಸಿ, ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಕೂಲಿ ಕಾರ್ಮಿಕರು ಪ್ರತಿಭಟನೆಯನ್ನು ಹಿಂಪಡೆದರು.</p>.<p>ಖರಾಬದಿನ್ನಿ ಗ್ರಾಮದ ಕೂಲಿಕಾರ್ಮಿಕರಾದ ಮಂಜಮ್ಮ, ಮಲ್ಲಮ್ಮ, ಬಸಮ್ಮ, ಶಾಂತಮ್ಮ, ಯಲ್ಲಮ್ಮ, ಸಿದ್ದಮ್ಮ, ಜಲಾಲ್ಬಿ, ಶಿವಮ್ಮ, ಮೂಕಮ್ಮ, ನಾಗರಾಜ, ಅಮರೇಶ ಜೇಡಿ, ಅಯ್ಯಪ್ಪ, ಮಹಾಂತೇಶ, ಸತೀಶ, ಗಾದಿಲಿಂಗಪ್ಪ, ಹಂಪಯ್ಯ ಬಾದರ್ಲಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಪೋತ್ನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಖರಾಬದಿನ್ನಿ ಗ್ರಾಮದ ನೂರಾರು ನರೇಗಾ ಕೂಲಿ ಕಾರ್ಮಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಉದ್ಯೋಗ ಖಾತರಿ ನಿಯಮದಂತೆ ಶೇ50ರಷ್ಟು ಕೆಲಸ ಮಾಡಿದರೂ ಪೂರ್ಣಗೊಂಡ ಕೆಲಸದ ಶೇ100ರಷ್ಟು ಕೂಲಿ ನೀಡಬೇಕು. ಆದರೆ, ಅಧಿಕಾರಿಗಳು ಕಡಿಮೆ ಮೊತ್ತದ ಕೂಲಿ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಸವರಾಜ ಕೂಲಿಕಾರ್ಮಿಕರಿಂದ ಮನವಿ ಸ್ವೀಕರಿಸಿ, ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಕೂಲಿ ಕಾರ್ಮಿಕರು ಪ್ರತಿಭಟನೆಯನ್ನು ಹಿಂಪಡೆದರು.</p>.<p>ಖರಾಬದಿನ್ನಿ ಗ್ರಾಮದ ಕೂಲಿಕಾರ್ಮಿಕರಾದ ಮಂಜಮ್ಮ, ಮಲ್ಲಮ್ಮ, ಬಸಮ್ಮ, ಶಾಂತಮ್ಮ, ಯಲ್ಲಮ್ಮ, ಸಿದ್ದಮ್ಮ, ಜಲಾಲ್ಬಿ, ಶಿವಮ್ಮ, ಮೂಕಮ್ಮ, ನಾಗರಾಜ, ಅಮರೇಶ ಜೇಡಿ, ಅಯ್ಯಪ್ಪ, ಮಹಾಂತೇಶ, ಸತೀಶ, ಗಾದಿಲಿಂಗಪ್ಪ, ಹಂಪಯ್ಯ ಬಾದರ್ಲಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>