<p><strong>ಮಾನ್ವಿ</strong>: ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಫೆ.6ರಂದು ಕಾರು ಹಾಗೂ ನಗದು ಹಣ ದೋಚಿದ್ದ ಆರೋಪಿಗಳನ್ನು ಮಾನ್ವಿ ಪೊಲೀಸ್ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಅಂದು ಸಂಜೆ ನೀರಮಾನ್ವಿ ಗ್ರಾಮದಲ್ಲಿ ನಡೆದ ರೇಣುಕಾ ಯಲ್ಲಮ್ಮ ದೇವಿ ಜಾತ್ರೆಗೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರೊಬ್ಬರಿಗೆ ಸೇರಿದ ಕಾರನ್ನು 5 ಜನರ ತಂಡ ಬೈಕ್ಗಳಿಂದ ಅಡಗಟ್ಟಿ ಕಾರಿನಲ್ಲಿದ್ದ ಚಾಲಕನನ್ನು ತಳಿಸಿದ್ದರು. ನಂತರ ಕಾರು, ನಗದು ಹಣ ಹಾಗೂ ಮೊಬೈಲ್ ಸಮೇತವಾಗಿ ದೋಚಿಕೊಂಡು ಪರಾರಿಯಾಗಿದ್ದರು.</p>.<p>ಕಾರು ಚಾಲಕ ಬಾಲಾಜಿ ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪಿ.ಐ ಸೋಮಶೇಖರ ಎಸ್. ಕೆಂಚರೆಡ್ಡಿ ಕಾರು ಚಾಲಕನ ಮೊಬೈಲ್ ಲೊಕೇಶನ್ ಅಧಾರದಲ್ಲಿ ತಾಲ್ಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಶನಿವಾರ ಬೆಳಿಗ್ಗೆ ಪತ್ತೆ ಹಚ್ಚಿ 5 ಜನ ಆರೋಪಿತರಲ್ಲಿ 3 ಜನ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಆರೋಪಿಗಳಿಂದ ಕಾರು ಹಾಗೂ ಬೈಕ್ ವಶಕ್ಕೆ ಪಡೆದಿದ್ದು, ಇನ್ನಿಬ್ಬರು ಆರೋಪಿತರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಮಾನ್ವಿ ಪಟ್ಟಣ ಹಾಗೂ ಹಿರೇಕೊಟ್ನೆಕಲ್ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಫೆ.6ರಂದು ಕಾರು ಹಾಗೂ ನಗದು ಹಣ ದೋಚಿದ್ದ ಆರೋಪಿಗಳನ್ನು ಮಾನ್ವಿ ಪೊಲೀಸ್ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಅಂದು ಸಂಜೆ ನೀರಮಾನ್ವಿ ಗ್ರಾಮದಲ್ಲಿ ನಡೆದ ರೇಣುಕಾ ಯಲ್ಲಮ್ಮ ದೇವಿ ಜಾತ್ರೆಗೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರೊಬ್ಬರಿಗೆ ಸೇರಿದ ಕಾರನ್ನು 5 ಜನರ ತಂಡ ಬೈಕ್ಗಳಿಂದ ಅಡಗಟ್ಟಿ ಕಾರಿನಲ್ಲಿದ್ದ ಚಾಲಕನನ್ನು ತಳಿಸಿದ್ದರು. ನಂತರ ಕಾರು, ನಗದು ಹಣ ಹಾಗೂ ಮೊಬೈಲ್ ಸಮೇತವಾಗಿ ದೋಚಿಕೊಂಡು ಪರಾರಿಯಾಗಿದ್ದರು.</p>.<p>ಕಾರು ಚಾಲಕ ಬಾಲಾಜಿ ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪಿ.ಐ ಸೋಮಶೇಖರ ಎಸ್. ಕೆಂಚರೆಡ್ಡಿ ಕಾರು ಚಾಲಕನ ಮೊಬೈಲ್ ಲೊಕೇಶನ್ ಅಧಾರದಲ್ಲಿ ತಾಲ್ಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಶನಿವಾರ ಬೆಳಿಗ್ಗೆ ಪತ್ತೆ ಹಚ್ಚಿ 5 ಜನ ಆರೋಪಿತರಲ್ಲಿ 3 ಜನ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಆರೋಪಿಗಳಿಂದ ಕಾರು ಹಾಗೂ ಬೈಕ್ ವಶಕ್ಕೆ ಪಡೆದಿದ್ದು, ಇನ್ನಿಬ್ಬರು ಆರೋಪಿತರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಮಾನ್ವಿ ಪಟ್ಟಣ ಹಾಗೂ ಹಿರೇಕೊಟ್ನೆಕಲ್ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>