<p>ಮಾನ್ವಿ: ತಾಲ್ಲೂಕಿನ ಹಿರೇಕೊಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊರವಲಯದ ಹೊಲದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಮಾನ್ವಿ ಪೊಲೀಸರು ದಾಳಿ ನಡೆಸಿ, ಜಾಲದ ಕಿಂಗ್ಪಿನ್ ಸೇರಿ 11 ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತ ಪ್ರಮುಖ ಆರೋಪಿ ತಾಯಪ್ಪ ಯಲ್ಲಪ್ಪ ಭೋವಿ ಮಾನ್ವಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾನೆ. ಆರೋಪಿ ತಾಯಪ್ಪ ಉದ್ಯೋಗ ಹುಡುಕುವ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಹೆಚ್ಚಿನ ಸಂಬಳದ ಉದ್ಯೋಗದ ಆಮಿಷವೊಡ್ಡಿ ತನ್ನ ಜಾಲಕ್ಕೆ ಸೆಳೆಯುತ್ತಿದ್ದನು ಎನ್ನಲಾಗಿದೆ.</p>.<p>ಈ ಕುರಿತು ಖಚಿತ ಮಾಹಿತಿ ಪಡೆದ ಮಾನ್ವಿ ಪೊಲೀಸರು ಮಾನ್ವಿ ಪೊಲೀಸ್ ಠಾಣೆಯ ಪಿ.ಐ ಸೋಮಶೇಖರ ಎಸ್. ಕೆಂಚರೆಡ್ಡಿ ನೇತೃತ್ವದಲ್ಲಿ ಶನಿವಾರ ರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿ ಜಾಲವನ್ನು ಭೇದಿಸಿದ್ದಾರೆ.</p>.<p>ದಾಳಿಯ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, ಅವರಿಗೆ ಅಗತ್ಯ ನೆರವು ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-32-882867588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ತಾಲ್ಲೂಕಿನ ಹಿರೇಕೊಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊರವಲಯದ ಹೊಲದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಮಾನ್ವಿ ಪೊಲೀಸರು ದಾಳಿ ನಡೆಸಿ, ಜಾಲದ ಕಿಂಗ್ಪಿನ್ ಸೇರಿ 11 ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತ ಪ್ರಮುಖ ಆರೋಪಿ ತಾಯಪ್ಪ ಯಲ್ಲಪ್ಪ ಭೋವಿ ಮಾನ್ವಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾನೆ. ಆರೋಪಿ ತಾಯಪ್ಪ ಉದ್ಯೋಗ ಹುಡುಕುವ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಹೆಚ್ಚಿನ ಸಂಬಳದ ಉದ್ಯೋಗದ ಆಮಿಷವೊಡ್ಡಿ ತನ್ನ ಜಾಲಕ್ಕೆ ಸೆಳೆಯುತ್ತಿದ್ದನು ಎನ್ನಲಾಗಿದೆ.</p>.<p>ಈ ಕುರಿತು ಖಚಿತ ಮಾಹಿತಿ ಪಡೆದ ಮಾನ್ವಿ ಪೊಲೀಸರು ಮಾನ್ವಿ ಪೊಲೀಸ್ ಠಾಣೆಯ ಪಿ.ಐ ಸೋಮಶೇಖರ ಎಸ್. ಕೆಂಚರೆಡ್ಡಿ ನೇತೃತ್ವದಲ್ಲಿ ಶನಿವಾರ ರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿ ಜಾಲವನ್ನು ಭೇದಿಸಿದ್ದಾರೆ.</p>.<p>ದಾಳಿಯ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, ಅವರಿಗೆ ಅಗತ್ಯ ನೆರವು ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-32-882867588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>