<p><strong>ಲಿಂಗಸುಗೂರು:</strong> ‘ಮಾರ್ಚ್ ಅಂತ್ಯದೊಳಗೆ ಇಲಾಖೆಗೆ ನೀಡಿರುವ ಗುರಿ ಸಾಧಿಸುವತ್ತ ಗಮನ ಹರಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ವಿಜಯಶಂಕರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕು ಪಂಚಾಯಿತಿಯಿಂದ ಮಂಜೂರಾಗಿರುವ ಅನುದಾನದಲ್ಲಿ ಅಗತ್ಯಕ್ಕನುಸಾರವಾಗಿ ಖರ್ಚು ಮಾಡುವ ಮೂಲಕ ನಿಗದಿಪಡಿಸಿರುವ ಗುರಿ ಸಾಧಿಸಬೇಕು. ವಿನಾಕಾರಣ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ’ ಎಂದರು.</p>.<p>‘ತಾಲ್ಲೂಕು ಪಂಚಾಯಿತಿ ತಾಲ್ಲೂಕು ಆರೋಗ್ಯ ಇಲಾಖೆಗೆ ನೀಡಿರುವ ₹13 ಲಕ್ಷ ಅನುದಾನವನ್ನು ಕಟ್ಟಡ ಮತ್ತು ಸಲಕರಣೆಗೆ ಬಳಕೆ ಮಾಡಬೇಕು. ರೋಗಿಗಳಿಗೆ ಅನುಕೂಲವಾಗುವ ಸಾಮಗ್ರಿಗಳನ್ನು ಖರೀದಿಸಬೇಕು’ ಎಂದು ಟಿಎಚ್ಒ ಡಾ.ಅಮರೇಶ ಪಾಟೀಲ ಅವರಿಗೆ ಸೂಚಿಸಿದರು.</p>.<p>‘ಬಿಲ್ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದರೆ ಹೇಗೆ? ಎರಡು ದಿನಗಳಲ್ಲಿ ಬಿಲ್ ಸಲ್ಲಿಸಬೇಕು’ ಎಂದು ಸಿಡಿಪಿಒಗೆ ಸೂಚಿಸಿದರು.</p>.<p>‘ಅವಶ್ಯಕತೆ ಇಲ್ಲದೆ ಪ್ರಸ್ತಾವ ಸಲ್ಲಿಸಬೇಡಿ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅನುದಾನ ಬಳಕೆ ಮಾಡಬೇಕು. ದೇವರಭೂಪುರ, ಮಾಚನೂರು ಶಾಲೆಯಲ್ಲಿ ಕಟ್ಟಡದ ಅವಶ್ಯಕತೆ ಇದ್ದರೆ ನಿರ್ಮಿಸಿ, ಇಲ್ಲವೇ ತಾಲ್ಲೂಕಿನಲ್ಲಿ ತೀರಾ ಅಗತ್ಯವಿರುವ ಕಡೆಗಳಲ್ಲಿ ಕೊಠಡಿ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಆರ್ಡಿಪಿಆರ್ ಎಇಇಗೆ ಸೂಚಿಸಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯಲ್ಲಿ ನ್ಯಾಯಾಲಯದ ಆದೇಶ ಮೇರೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕು. ಎರಡು ದಿನಗಳಲ್ಲಿ ವೇತನ ಪಾವತಿಸಿ’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.</p>.<p>ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ಮಾರ್ಚ್ ಅಂತ್ಯದೊಳಗೆ ಇಲಾಖೆಗೆ ನೀಡಿರುವ ಗುರಿ ಸಾಧಿಸುವತ್ತ ಗಮನ ಹರಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ವಿಜಯಶಂಕರ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕು ಪಂಚಾಯಿತಿಯಿಂದ ಮಂಜೂರಾಗಿರುವ ಅನುದಾನದಲ್ಲಿ ಅಗತ್ಯಕ್ಕನುಸಾರವಾಗಿ ಖರ್ಚು ಮಾಡುವ ಮೂಲಕ ನಿಗದಿಪಡಿಸಿರುವ ಗುರಿ ಸಾಧಿಸಬೇಕು. ವಿನಾಕಾರಣ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ’ ಎಂದರು.</p>.<p>‘ತಾಲ್ಲೂಕು ಪಂಚಾಯಿತಿ ತಾಲ್ಲೂಕು ಆರೋಗ್ಯ ಇಲಾಖೆಗೆ ನೀಡಿರುವ ₹13 ಲಕ್ಷ ಅನುದಾನವನ್ನು ಕಟ್ಟಡ ಮತ್ತು ಸಲಕರಣೆಗೆ ಬಳಕೆ ಮಾಡಬೇಕು. ರೋಗಿಗಳಿಗೆ ಅನುಕೂಲವಾಗುವ ಸಾಮಗ್ರಿಗಳನ್ನು ಖರೀದಿಸಬೇಕು’ ಎಂದು ಟಿಎಚ್ಒ ಡಾ.ಅಮರೇಶ ಪಾಟೀಲ ಅವರಿಗೆ ಸೂಚಿಸಿದರು.</p>.<p>‘ಬಿಲ್ ಸಲ್ಲಿಸಲು ಮೂರು ತಿಂಗಳು ವಿಳಂಬ ಮಾಡಿದರೆ ಹೇಗೆ? ಎರಡು ದಿನಗಳಲ್ಲಿ ಬಿಲ್ ಸಲ್ಲಿಸಬೇಕು’ ಎಂದು ಸಿಡಿಪಿಒಗೆ ಸೂಚಿಸಿದರು.</p>.<p>‘ಅವಶ್ಯಕತೆ ಇಲ್ಲದೆ ಪ್ರಸ್ತಾವ ಸಲ್ಲಿಸಬೇಡಿ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅನುದಾನ ಬಳಕೆ ಮಾಡಬೇಕು. ದೇವರಭೂಪುರ, ಮಾಚನೂರು ಶಾಲೆಯಲ್ಲಿ ಕಟ್ಟಡದ ಅವಶ್ಯಕತೆ ಇದ್ದರೆ ನಿರ್ಮಿಸಿ, ಇಲ್ಲವೇ ತಾಲ್ಲೂಕಿನಲ್ಲಿ ತೀರಾ ಅಗತ್ಯವಿರುವ ಕಡೆಗಳಲ್ಲಿ ಕೊಠಡಿ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಆರ್ಡಿಪಿಆರ್ ಎಇಇಗೆ ಸೂಚಿಸಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯಲ್ಲಿ ನ್ಯಾಯಾಲಯದ ಆದೇಶ ಮೇರೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕು. ಎರಡು ದಿನಗಳಲ್ಲಿ ವೇತನ ಪಾವತಿಸಿ’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.</p>.<p>ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ತಾಲ್ಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>