<p>ಪ್ರಕಾಶ ಮಸ್ಕಿ</p>.<p>ಮಸ್ಕಿ: ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಪಟ್ಟಣದ 15ನೇ ವಾರ್ಡ್ನ ಧನಗಾರವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚರಂಡಿ ನೀರಿನಲ್ಲಿ ಶಾಲೆಗೆ ತೆರಳಬೇಕಾದ ಸ್ಥಿತಿ ಬಂದಿರುವುದು ಪುರಸಭೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.</p>.<p>ಮೂರು ವರ್ಷಗಳ ಹಿಂದೆ ವಿಶೇಷ ಅನುದಾನದಡಿ ₹ 20 ಲಕ್ಷ ವೆಚ್ಚದಲ್ಲಿ 15 ವಾರ್ಡ್ನಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿ. ಇಂದು ಹಾಳಾಗಿದ್ದು, ಅದರ ಕೊಳಚೆ ನೀರು ಶಾಲಾ ಆವರಣದಲ್ಲಿ ಸಂಗ್ರಹವಾಗುತ್ತಿದೆ!</p>.<p>ನಡು ರಸ್ತೆಯಲ್ಲಿ ಚರಂಡಿ ನಿರ್ಮಿಸಲಾಗಿದ್ದು ಸ್ಥಳೀಯ ನಿವಾಸಿಗಳು ತಿರುಗಾಡಲು ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರ ಪಾಡಂತೂ ಕೇಳ ಬಾರದು. ಶಾಲೆಯ ಈ ಬಡವಾಣೆಯಲ್ಲಿ ವಾಸಿಸುವ ಜನರು ನಿತ್ಯ ಸೊಳ್ಳೆಗಳ ಜೊತೆ ಜೀವನ ಸಾಗಿಸುವಂತಾಗಿದ್ದರೂ ಸಹ ಪುರಸಭೆಯವರು ಈ ಕಡೆ ಗಮನ ಹರಿಸದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಶಾಲೆಯ ಮುಂಭಾಗದಲ್ಲಿಯೇ ಚರಂಡಿ ನೀರು ಸಂಗ್ರಹವಾಗುತ್ತಿದ್ದರಿಂದ ಹಂದಿಗಳ ಕಾಟ ಹೆಚ್ಚಾಗಿದೆ. ಸುತ್ತಮುತ್ತಲಿನ ಜನರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಹಲವಾರು ಬಾರಿ ಪುರಸಭೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಒಂದು ಕಡೆ ಸ್ವಚ್ಛತೆ ಬಗ್ಗೆ ಮಾತನಾಡುವ ಅಧಿಕಾರಿಗಳು ನೂರಾರು ವಿದ್ಯಾರ್ಥಿಗಳಿಗೆ ಅಕ್ಷರ ಕಲಿಸುವ ಶಾಲೆಯ ಮುಂದೆಯೇ ಗಲೀಜು ನಿರ್ಮಾಣವಾಗಿದ್ದರೂ ಸಹ ಚರಂಡಿ ದುರಸ್ತಿಗೊಳಿಸದೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಪಾಲಕರೊಬ್ಬರು ತಿಳಿಸಿದರು.</p>.<p>ಪುರಸಭೆ ಅಧಿಕಾರಿಗಳು ಅವೈಜ್ಞಾನಿಕ ಚರಂಡಿ ಸರಿಪಡಿಸಿ, ಶಾಲಾ ವಾತಾವರಣವನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಕಾಶ ಮಸ್ಕಿ</p>.<p>ಮಸ್ಕಿ: ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಪಟ್ಟಣದ 15ನೇ ವಾರ್ಡ್ನ ಧನಗಾರವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಚರಂಡಿ ನೀರಿನಲ್ಲಿ ಶಾಲೆಗೆ ತೆರಳಬೇಕಾದ ಸ್ಥಿತಿ ಬಂದಿರುವುದು ಪುರಸಭೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.</p>.<p>ಮೂರು ವರ್ಷಗಳ ಹಿಂದೆ ವಿಶೇಷ ಅನುದಾನದಡಿ ₹ 20 ಲಕ್ಷ ವೆಚ್ಚದಲ್ಲಿ 15 ವಾರ್ಡ್ನಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿ. ಇಂದು ಹಾಳಾಗಿದ್ದು, ಅದರ ಕೊಳಚೆ ನೀರು ಶಾಲಾ ಆವರಣದಲ್ಲಿ ಸಂಗ್ರಹವಾಗುತ್ತಿದೆ!</p>.<p>ನಡು ರಸ್ತೆಯಲ್ಲಿ ಚರಂಡಿ ನಿರ್ಮಿಸಲಾಗಿದ್ದು ಸ್ಥಳೀಯ ನಿವಾಸಿಗಳು ತಿರುಗಾಡಲು ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರ ಪಾಡಂತೂ ಕೇಳ ಬಾರದು. ಶಾಲೆಯ ಈ ಬಡವಾಣೆಯಲ್ಲಿ ವಾಸಿಸುವ ಜನರು ನಿತ್ಯ ಸೊಳ್ಳೆಗಳ ಜೊತೆ ಜೀವನ ಸಾಗಿಸುವಂತಾಗಿದ್ದರೂ ಸಹ ಪುರಸಭೆಯವರು ಈ ಕಡೆ ಗಮನ ಹರಿಸದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಶಾಲೆಯ ಮುಂಭಾಗದಲ್ಲಿಯೇ ಚರಂಡಿ ನೀರು ಸಂಗ್ರಹವಾಗುತ್ತಿದ್ದರಿಂದ ಹಂದಿಗಳ ಕಾಟ ಹೆಚ್ಚಾಗಿದೆ. ಸುತ್ತಮುತ್ತಲಿನ ಜನರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಹಲವಾರು ಬಾರಿ ಪುರಸಭೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಒಂದು ಕಡೆ ಸ್ವಚ್ಛತೆ ಬಗ್ಗೆ ಮಾತನಾಡುವ ಅಧಿಕಾರಿಗಳು ನೂರಾರು ವಿದ್ಯಾರ್ಥಿಗಳಿಗೆ ಅಕ್ಷರ ಕಲಿಸುವ ಶಾಲೆಯ ಮುಂದೆಯೇ ಗಲೀಜು ನಿರ್ಮಾಣವಾಗಿದ್ದರೂ ಸಹ ಚರಂಡಿ ದುರಸ್ತಿಗೊಳಿಸದೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಪಾಲಕರೊಬ್ಬರು ತಿಳಿಸಿದರು.</p>.<p>ಪುರಸಭೆ ಅಧಿಕಾರಿಗಳು ಅವೈಜ್ಞಾನಿಕ ಚರಂಡಿ ಸರಿಪಡಿಸಿ, ಶಾಲಾ ವಾತಾವರಣವನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>