<p>ಮಸ್ಕಿ: ‘35 ವರ್ಷಗಳ ನಂತರ ಸ್ವತಂತ್ರ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿರುವ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಭಿವೃದ್ಧಿಗೆ ನೂತನ ಆಡಳಿತ ಮಂಡಳಿ ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,‘ಮಾರುಕಟ್ಟೆ ವ್ಯವಸ್ಥೆ ರೈತರ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು’ ಎಂದರು.</p>.<p>‘ರೈತರಿಗೆ ಉತ್ತಮ ಬೆಲೆ ಸಿಗುವಂತೆ ಪಾರದರ್ಶಕ ವಹಿವಾಟು ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಸೂಚಿಸಿದರು.</p>.<p>‘ಮಾರುಕಟ್ಟೆಯಲ್ಲಿ ಶೆಡ್, ಕುಡಿಯುವ ನೀರು, ತೂಕ ಮಾಪನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು. ರೈತರು ತೊಂದರೆ ಅನುಭವಿಸದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>‘ಮಾರುಕಟ್ಟೆಯಲ್ಲಿ ಇನ್ನೂ ವ್ಯಾಪಾರ ಆರಂಭಿಸದ ವರ್ತಕರಿಗೆ ಕೂಡಲೇ ನೋಟಿಸ್ ನೀಡಿ ವ್ಯಾಪಾರ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ಮಸ್ಕಿ ಮಾರುಕಟ್ಟೆಯನ್ನು ಸ್ವತಂತ್ರ ಮಾರುಕಟ್ಟೆಯನ್ನಾಗಿಸಲು ಕಾರಣಿಕರ್ತರಾದ ಶಾಸಕ ತುರ್ವಿಹಾಳ ಅವರನ್ನು ನೂತನ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.</p>.<p>ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಉಪಾಧ್ಯಕ್ಷ ನಿಂಗಯ್ಯ ಮಲ್ಲದಗುಡ್ಡ, ಸದಸ್ಯರಾದ ಪೂರ್ಣಿಮಾ ವೀರೇಶ ಪಾಟೀಲ, ಕುಸುಮ ಬಲವಂತರಾಯ ಪಾಟೀಲ, ಮಲ್ಲರೆಡ್ಡೆಪ್ಪ ಹಾಗೂ ಕಾರ್ಯದರ್ಶಿ ಇಸ್ಮಾಯಿಲ್ ಬಾಳನವರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-646690490</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಸ್ಕಿ: ‘35 ವರ್ಷಗಳ ನಂತರ ಸ್ವತಂತ್ರ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿರುವ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಭಿವೃದ್ಧಿಗೆ ನೂತನ ಆಡಳಿತ ಮಂಡಳಿ ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,‘ಮಾರುಕಟ್ಟೆ ವ್ಯವಸ್ಥೆ ರೈತರ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು’ ಎಂದರು.</p>.<p>‘ರೈತರಿಗೆ ಉತ್ತಮ ಬೆಲೆ ಸಿಗುವಂತೆ ಪಾರದರ್ಶಕ ವಹಿವಾಟು ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಸೂಚಿಸಿದರು.</p>.<p>‘ಮಾರುಕಟ್ಟೆಯಲ್ಲಿ ಶೆಡ್, ಕುಡಿಯುವ ನೀರು, ತೂಕ ಮಾಪನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು. ರೈತರು ತೊಂದರೆ ಅನುಭವಿಸದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>‘ಮಾರುಕಟ್ಟೆಯಲ್ಲಿ ಇನ್ನೂ ವ್ಯಾಪಾರ ಆರಂಭಿಸದ ವರ್ತಕರಿಗೆ ಕೂಡಲೇ ನೋಟಿಸ್ ನೀಡಿ ವ್ಯಾಪಾರ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ಮಸ್ಕಿ ಮಾರುಕಟ್ಟೆಯನ್ನು ಸ್ವತಂತ್ರ ಮಾರುಕಟ್ಟೆಯನ್ನಾಗಿಸಲು ಕಾರಣಿಕರ್ತರಾದ ಶಾಸಕ ತುರ್ವಿಹಾಳ ಅವರನ್ನು ನೂತನ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.</p>.<p>ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಉಪಾಧ್ಯಕ್ಷ ನಿಂಗಯ್ಯ ಮಲ್ಲದಗುಡ್ಡ, ಸದಸ್ಯರಾದ ಪೂರ್ಣಿಮಾ ವೀರೇಶ ಪಾಟೀಲ, ಕುಸುಮ ಬಲವಂತರಾಯ ಪಾಟೀಲ, ಮಲ್ಲರೆಡ್ಡೆಪ್ಪ ಹಾಗೂ ಕಾರ್ಯದರ್ಶಿ ಇಸ್ಮಾಯಿಲ್ ಬಾಳನವರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-32-646690490</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>