ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಉಸ್ತುವಾರಿ: ವಿಜಯೇಂದ್ರಗೆ ಮನವಿ– ಪ್ರತಾಪಗೌಡ ಪಾಟೀಲ

Last Updated 12 ನವೆಂಬರ್ 2020, 21:54 IST
ಅಕ್ಷರ ಗಾತ್ರ

ರಾಯಚೂರು: ‘ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೇ ವಹಿಸಬೇಕು’ ಎಂದು ಬಿಜೆಪಿಯಿಂದ ಸ್ಪರ್ಧಿಸಲಿರುವ ಪ್ರತಾಪಗೌಡ ಪಾಟೀಲ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

‘ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ನಿರ್ಧರಿಸುತ್ತಿದ್ದು, ಅವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ
ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಆಹ್ವಾನಿಸಿದಾಗ, ಅವರೂ ಇದೇ ಮಾತು ಹೇಳಿದ್ದಾರೆ. ಒಂದು ವೇಳೆ ಬಸವಕಲ್ಯಾಣದ ಜವಾಬ್ದಾರಿ ವಹಿಸಿದರೂ ಮಸ್ಕಿ ಕ್ಷೇತ್ರದಲ್ಲಿಯೂ ಕೆಲ ದಿನ ಪ್ರವಾಸ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಪ್ರತಾಪಗೌಡ ಪಾಟೀಲ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT