‘ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ನಿರ್ಧರಿಸುತ್ತಿದ್ದು, ಅವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ
ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಆಹ್ವಾನಿಸಿದಾಗ, ಅವರೂ ಇದೇ ಮಾತು ಹೇಳಿದ್ದಾರೆ. ಒಂದು ವೇಳೆ ಬಸವಕಲ್ಯಾಣದ ಜವಾಬ್ದಾರಿ ವಹಿಸಿದರೂ ಮಸ್ಕಿ ಕ್ಷೇತ್ರದಲ್ಲಿಯೂ ಕೆಲ ದಿನ ಪ್ರವಾಸ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಪ್ರತಾಪಗೌಡ ಪಾಟೀಲ ಅವರು ತಿಳಿಸಿದರು.