ಮುದಗಲ್: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಅಂಗೀಕರಿಸಿ ಯಥಾವತ್ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಹಲವು ಹೋರಾಟ, ಪ್ರತಿಭಟನೆಗಳು ನಡೆದರೂ ಸರ್ಕಾರ ನಿರ್ಲಕ್ಷಿಸುತ್ತಿವೆ. ಕೂಡಲೇ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
‘ರಾಜ್ಯದ ಶಾಸನ ಸಭೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರವಿದೆ‘ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮುಂದಿನ ಅಧೀವೇಶನದಲ್ಲಿ ವರದಿ ಅಂಗೀಕರಿಸಿ ಒಳ ಮೀಸಲಾತಿ ಜಾರಿಗೊಳಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಸರ್ಕಾರದ ವಿರುದ್ಧ ಚಳವಳಿ ಮಾಡಬೇಕಾಗುತ್ತದೆ ಎಂದರು.