ತುರ್ವಿಹಾಳ ಪಟ್ಟಣದ ಶ್ರೀನಿವಾಸ ಕ್ಯಾಂಪ್ ರಸ್ತೆಯ ಪಕ್ಕದಲ್ಲಿರುವ ವಾರ್ಡ್-1 ಮತ್ತು 3ರಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾಗ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಇದೇ ವೇಳೆ ಸ್ಥಳಕ್ಕೆ ಧಾವಿಸಿದ ಚುನಾವಣೆ ಜಾಗೃತ ದಳದ ಅಧಿಕಾರಿ ಎಂ.ಭೀರಪ್ಪ ಅವರ ತಂಡ ಹಾಸನ ಮೂಲದ ಬಿಜೆಪಿ ಕಾರ್ಯಕರ್ತರಾದ ನವೀನ್, ಸಚಿನ್ ಮತ್ತು ಆನಂದ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.