<p><strong>ಮಸ್ಕಿ (ರಾಯಚೂರು): </strong>ಮಸ್ಕಿ ಉಪಚುನಾವಣೆ ಕಣದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಸೋಮವಾರ ಒಂದೇ ದಿನ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ.</p>.<p>ಈ ಮೊದಲು ಇಬ್ಬರೂನಾಮಪತ್ರ ಸಲ್ಲಿಸಿದ್ದು ಈಗ ಅಧಿಕೃತವಾಗಿ ಬಿ ಫಾರಂ ನೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.</p>.<p>ಎರಡೂ ಪಕ್ಷಗಳಿಂದ ಸಭೆಗಳನ್ನು ಆಯೋಜಿಸಲಾಗಿದೆ. ಪಕ್ಷದ ಕಚೇರಿ ಪಕ್ಕದಲ್ಲಿಯೇ ಬಿಜೆಪಿ ಸಭೆ ನಡೆಯಲಿದ್ದು, ಸಚಿವ ಶ್ರೀರಾಮುಲು, ಎನ್.ರವಿಕುಮಾರ್, ಬಿ.ವೈ.ವಿಜಯೇಂದ್ರ, ಶಾಸಕರಾದ ರಾಜುಗೌಡ, ಡಾ.ಶಿವರಾಜ ಪಾಟೀಲಪಾಲ್ಗೊಳ್ಳುವರು.</p>.<p>ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ.ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಸೇರಿದಂತೆ ನೆರೆಯ ಜಿಲ್ಲೆಗಳ ಪಕ್ಷದ ನಾಯಕರು ಕಾಂಗ್ರೆಸ್ ಅಭ್ಯರ್ಥಿಬಸನಗೌಡ ತುರ್ವಿಹಾಳ ಅವರಿಗೆ ನಾಮಪತ್ರ ಸಲ್ಲಿಸುವಾಗ ಜೊತೆಯಾಗುವರು.</p>.<p>ಕನಕದಾಸ ವೃತ್ತದಿಂದ ಕಾಂಗ್ರೆಸ್ ರ್ಯಾಲಿ ನಡೆಯಲಿದೆ. ನಂತರ ಬಹಿರಂಗ ಸಭೆ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ (ರಾಯಚೂರು): </strong>ಮಸ್ಕಿ ಉಪಚುನಾವಣೆ ಕಣದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಸೋಮವಾರ ಒಂದೇ ದಿನ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ.</p>.<p>ಈ ಮೊದಲು ಇಬ್ಬರೂನಾಮಪತ್ರ ಸಲ್ಲಿಸಿದ್ದು ಈಗ ಅಧಿಕೃತವಾಗಿ ಬಿ ಫಾರಂ ನೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.</p>.<p>ಎರಡೂ ಪಕ್ಷಗಳಿಂದ ಸಭೆಗಳನ್ನು ಆಯೋಜಿಸಲಾಗಿದೆ. ಪಕ್ಷದ ಕಚೇರಿ ಪಕ್ಕದಲ್ಲಿಯೇ ಬಿಜೆಪಿ ಸಭೆ ನಡೆಯಲಿದ್ದು, ಸಚಿವ ಶ್ರೀರಾಮುಲು, ಎನ್.ರವಿಕುಮಾರ್, ಬಿ.ವೈ.ವಿಜಯೇಂದ್ರ, ಶಾಸಕರಾದ ರಾಜುಗೌಡ, ಡಾ.ಶಿವರಾಜ ಪಾಟೀಲಪಾಲ್ಗೊಳ್ಳುವರು.</p>.<p>ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ.ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಸೇರಿದಂತೆ ನೆರೆಯ ಜಿಲ್ಲೆಗಳ ಪಕ್ಷದ ನಾಯಕರು ಕಾಂಗ್ರೆಸ್ ಅಭ್ಯರ್ಥಿಬಸನಗೌಡ ತುರ್ವಿಹಾಳ ಅವರಿಗೆ ನಾಮಪತ್ರ ಸಲ್ಲಿಸುವಾಗ ಜೊತೆಯಾಗುವರು.</p>.<p>ಕನಕದಾಸ ವೃತ್ತದಿಂದ ಕಾಂಗ್ರೆಸ್ ರ್ಯಾಲಿ ನಡೆಯಲಿದೆ. ನಂತರ ಬಹಿರಂಗ ಸಭೆ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>