ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಹಾಕುವುದಾಗಿ ಬ್ಯಾಂಕ್‌ ಖಾತೆ ವಿವರ ಕೇಳಿದ ಕಾರ್ಯಕರ್ತರು ಪೊಲೀಸ್‌ ಠಾಣೆಯಲ್ಲಿ!

Last Updated 8 ಏಪ್ರಿಲ್ 2021, 13:34 IST
ಅಕ್ಷರ ಗಾತ್ರ

ತುರ್ವಿಹಾಳ (ರಾಯಚೂರು): ‘ಬ್ಯಾಂಕ್‌ ಖಾತೆ ವಿವರ ಕೊಡಿ, ನಿಮ್ಮ ಖಾತೆಗೆ ಹಣ ಹಾಕುತ್ತೇವೆ. ನಾವು ಬಿಜೆಪಿಯವರಿದ್ದೇವೆ' ಎಂದು ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತುರ್ವಿಹಾಳ ಸುತ್ತಮುತ್ತ ಗ್ರಾಮಗಳಲ್ಲಿ ಕೇಳುತ್ತಿದ್ದವರನ್ನು ಕಾಂಗ್ರೆಸ್‌ ಕಾರ್ಯಕರ್ತರು ಕರೆದೊಯ್ದು ತುರ್ವಿಹಾಳ ಪೊಲೀಸ್‌ ಠಾಣೆಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ.

ಕೇಸರಿ ಟವಲ್‌ ಸುತ್ತಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಹಾಸನ ಜಿಲ್ಲೆಯಿಂದ ಬಂದಿದ್ದಾರೆ ಎಂದು ಹೇಳಲಾಗಿದೆ.

‘ಬ್ಯಾಂಕ್‌ ಖಾತೆ ವಿವರ ಕೇಳುತ್ತಿದ್ದರು ಎಂದು ಒಂದು ಗುಂಪಿನವರು ಹೇಳುತ್ತಿದ್ದಾರೆ. ಇನ್ನೊಂದು ಗುಂಪಿನವರು, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಸದ್ಯಕ್ಕೆ ಎರಡು ಗುಂಪಿನ ವಿಚಾರಣೆ ಮಾಡುತ್ತಿದ್ದೇವೆ’ ಎಂದು ತುರ್ವಿಹಾಳ ಠಾಣೆ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT