<p><strong>ಮಸ್ಕಿ (ರಾಯಚೂರು): </strong>ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಪ್ಪೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಸಭೆಯಲ್ಲಿ ಕೆಲವು ಯುವಕರು ಕಾಂಗ್ರೆಸ್ ಬಾವುಟ ಬೀಸಿದ್ದರಿಂದ ಗಲಾಟೆ ನಡೆದಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ಮಧ್ಯೆ ಆರೋಪ, ಪ್ರತ್ಯಾರೋಪ ಶುರುವಾಗಿವೆ.</p>.<p>ಈ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ, ‘ಬಿಜೆಪಿಗೆ ಇಂತಹ ಗಲಾಟೆಗಳು ಹೊಸದೇನು ಅಲ್ಲ. ಮಸ್ಕಿಯಲ್ಲಿ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ನಮ್ಮ ಕಾರ್ಯಕರ್ತರುಈ ಬಗ್ಗೆ ತಲೆಕಡೆಸಿಕೊಂಡಿಲ್ಲ. ನಮ್ಮ ಗುರಿ ಇರುವುದು ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸುವುದು. ಸೋಲು ಕಾಂಗ್ರೆಸ್ನವರಿಗೆ ಮನವರಿಕೆಯಾಗಿದೆ’ ಎಂದರು.</p>.<p>ಕೆಪಿಸಿಸಿ ವಕ್ತಾರ ವಸಂತಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಗ್ರಾಮದಲ್ಲಿ ಕಾಂಗ್ರೆಸ್ ಸಭೆ ಇದ್ದಾಗ ಅಲ್ಲಲ್ಲಿ ಧ್ವಜಗಳನ್ನು ಕಟ್ಟಿದ್ದರು. ಆನಂತರ ಬಿಜೆಪಿ ಸಭೆ ಇದ್ದಾಗ, ಮೊದಲಿದ್ದ ಕಾಂಗ್ರೆಸ್ ಧ್ವಜಗಳನ್ನು ತೆಗೆದುಹಾಕಿದ್ದರು. ಈ ವಿಚಾರವಾಗಿ ಪೊಲೀಸರೊಂದಿಗೆ ಚರ್ಚಿಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಧ್ವಜಗಳನ್ನು ಹಿಡಿದು ಬಂದಿದ್ದರು. ಇದು ಗಲಾಟೆಗೆ ಕಾರಣ. ಬಿಜೆಪಿಯವರ ತಂತ್ರಗಳು ಮಸ್ಕಿ ಕ್ಷೇತ್ರದಲ್ಲಿ ನಡೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ (ರಾಯಚೂರು): </strong>ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಪ್ಪೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಸಭೆಯಲ್ಲಿ ಕೆಲವು ಯುವಕರು ಕಾಂಗ್ರೆಸ್ ಬಾವುಟ ಬೀಸಿದ್ದರಿಂದ ಗಲಾಟೆ ನಡೆದಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ಮಧ್ಯೆ ಆರೋಪ, ಪ್ರತ್ಯಾರೋಪ ಶುರುವಾಗಿವೆ.</p>.<p>ಈ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ, ‘ಬಿಜೆಪಿಗೆ ಇಂತಹ ಗಲಾಟೆಗಳು ಹೊಸದೇನು ಅಲ್ಲ. ಮಸ್ಕಿಯಲ್ಲಿ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ನಮ್ಮ ಕಾರ್ಯಕರ್ತರುಈ ಬಗ್ಗೆ ತಲೆಕಡೆಸಿಕೊಂಡಿಲ್ಲ. ನಮ್ಮ ಗುರಿ ಇರುವುದು ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸುವುದು. ಸೋಲು ಕಾಂಗ್ರೆಸ್ನವರಿಗೆ ಮನವರಿಕೆಯಾಗಿದೆ’ ಎಂದರು.</p>.<p>ಕೆಪಿಸಿಸಿ ವಕ್ತಾರ ವಸಂತಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಗ್ರಾಮದಲ್ಲಿ ಕಾಂಗ್ರೆಸ್ ಸಭೆ ಇದ್ದಾಗ ಅಲ್ಲಲ್ಲಿ ಧ್ವಜಗಳನ್ನು ಕಟ್ಟಿದ್ದರು. ಆನಂತರ ಬಿಜೆಪಿ ಸಭೆ ಇದ್ದಾಗ, ಮೊದಲಿದ್ದ ಕಾಂಗ್ರೆಸ್ ಧ್ವಜಗಳನ್ನು ತೆಗೆದುಹಾಕಿದ್ದರು. ಈ ವಿಚಾರವಾಗಿ ಪೊಲೀಸರೊಂದಿಗೆ ಚರ್ಚಿಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಧ್ವಜಗಳನ್ನು ಹಿಡಿದು ಬಂದಿದ್ದರು. ಇದು ಗಲಾಟೆಗೆ ಕಾರಣ. ಬಿಜೆಪಿಯವರ ತಂತ್ರಗಳು ಮಸ್ಕಿ ಕ್ಷೇತ್ರದಲ್ಲಿ ನಡೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>