ಕೆಪಿಸಿಸಿ ವಕ್ತಾರ ವಸಂತಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಗ್ರಾಮದಲ್ಲಿ ಕಾಂಗ್ರೆಸ್ ಸಭೆ ಇದ್ದಾಗ ಅಲ್ಲಲ್ಲಿ ಧ್ವಜಗಳನ್ನು ಕಟ್ಟಿದ್ದರು. ಆನಂತರ ಬಿಜೆಪಿ ಸಭೆ ಇದ್ದಾಗ, ಮೊದಲಿದ್ದ ಕಾಂಗ್ರೆಸ್ ಧ್ವಜಗಳನ್ನು ತೆಗೆದುಹಾಕಿದ್ದರು. ಈ ವಿಚಾರವಾಗಿ ಪೊಲೀಸರೊಂದಿಗೆ ಚರ್ಚಿಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಧ್ವಜಗಳನ್ನು ಹಿಡಿದು ಬಂದಿದ್ದರು. ಇದು ಗಲಾಟೆಗೆ ಕಾರಣ. ಬಿಜೆಪಿಯವರ ತಂತ್ರಗಳು ಮಸ್ಕಿ ಕ್ಷೇತ್ರದಲ್ಲಿ ನಡೆಯುವುದಿಲ್ಲ’ ಎಂದು ತಿರುಗೇಟು ನೀಡಿದರು.