<p><strong>ಮಸ್ಕಿ:</strong> ತಾಲ್ಲೂಕಿನ ನೆರೆಯ ಜಿಲ್ಲೆಗಳಲ್ಲಿ ಮಳೆ ಬೀಳುತ್ತಿರುವುದರಿಂದ ಪಟ್ಟಣದ ಸಮೀಪ ಮಾರಲದಿನ್ನಿಯಲ್ಲಿ ನಿರ್ಮಿಸಿರುವ ಮಸ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಿದೆ.</p>.<p>ಸೋಮವಾರ ಒಂದೇ ದಿನಕ್ಕೆ ನಾಲ್ಕು ಅಡಿಗಳಷ್ಟು ನೀರು ಹರಿದು ಬಂದಿದೆ ಎಂದು ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.</p>.<p>8 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಜಲಾಶಯವು 0.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಕಳೆದ ಮೂರು ತಿಂಗಳಿನಿಂದ ಬತ್ತಿ ಹೋಗಿತ್ತು. ಇದೀಗ ಮರುಜೀವ ಪಡೆದುಕೊಂಡಂತಾಗಿದೆ.</p>.<p>28 ಅಡಿಗಳ ಆಳ ನೀರು ಸಂಗ್ರಹ ಸಾಮರ್ಥ್ಯವಿದ್ದು, ವಾರ 8 ಅಡಿ ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಸೋಮವಾರ 6 ಅಡಿ ನೀರು ಬಂದಿದೆ. 14 ಅಡಿ ನೀರು ಸಂಗ್ರಹವಾಗಿದೆ. ಇನ್ನೂ 14 ಅಡಿ ನೀರು ಬಂದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.</p>.<p>ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚುತ್ತಿದ್ದರಿಂದ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ. ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.</p>.<p>’ಕುಷ್ಟಗಿ, ಗಜೇಂದ್ರಗಡ ಮುಂತಾದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚುವ ಸಾದ್ಯತೆ ಇದೆ’ ಎಂದು ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.</p>.<p>ಜಲಾಶಯದ ಒಳ ಹರಿವು ಹೆಚ್ಚುತ್ತಿರುವ ಕಾರಣ ಜಲಾಶಯದ ಕೆಳ ಭಾಗದಲ್ಲಿ ಬರುವ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಜಲಾಶಯ ಭರ್ತಿಯಾದರೆ ಮಸ್ಕಿ ಹಳ್ಳಕ್ಕೆ ನೀರು ಹರಿಸಲಾಗುತ್ತದೆ. ಇದರಿಂದ ಕುಡಿಯುವ ನೀರಿನ ತೊಂದರೆ ತಪ್ಪಲಿದೆ. ಜಾನುವಾರುಗಳಿಗೆ ಅನುಕೂಲವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ತಾಲ್ಲೂಕಿನ ನೆರೆಯ ಜಿಲ್ಲೆಗಳಲ್ಲಿ ಮಳೆ ಬೀಳುತ್ತಿರುವುದರಿಂದ ಪಟ್ಟಣದ ಸಮೀಪ ಮಾರಲದಿನ್ನಿಯಲ್ಲಿ ನಿರ್ಮಿಸಿರುವ ಮಸ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಿದೆ.</p>.<p>ಸೋಮವಾರ ಒಂದೇ ದಿನಕ್ಕೆ ನಾಲ್ಕು ಅಡಿಗಳಷ್ಟು ನೀರು ಹರಿದು ಬಂದಿದೆ ಎಂದು ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.</p>.<p>8 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಜಲಾಶಯವು 0.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಕಳೆದ ಮೂರು ತಿಂಗಳಿನಿಂದ ಬತ್ತಿ ಹೋಗಿತ್ತು. ಇದೀಗ ಮರುಜೀವ ಪಡೆದುಕೊಂಡಂತಾಗಿದೆ.</p>.<p>28 ಅಡಿಗಳ ಆಳ ನೀರು ಸಂಗ್ರಹ ಸಾಮರ್ಥ್ಯವಿದ್ದು, ವಾರ 8 ಅಡಿ ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಸೋಮವಾರ 6 ಅಡಿ ನೀರು ಬಂದಿದೆ. 14 ಅಡಿ ನೀರು ಸಂಗ್ರಹವಾಗಿದೆ. ಇನ್ನೂ 14 ಅಡಿ ನೀರು ಬಂದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.</p>.<p>ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚುತ್ತಿದ್ದರಿಂದ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ. ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.</p>.<p>’ಕುಷ್ಟಗಿ, ಗಜೇಂದ್ರಗಡ ಮುಂತಾದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚುವ ಸಾದ್ಯತೆ ಇದೆ’ ಎಂದು ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.</p>.<p>ಜಲಾಶಯದ ಒಳ ಹರಿವು ಹೆಚ್ಚುತ್ತಿರುವ ಕಾರಣ ಜಲಾಶಯದ ಕೆಳ ಭಾಗದಲ್ಲಿ ಬರುವ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಜಲಾಶಯ ಭರ್ತಿಯಾದರೆ ಮಸ್ಕಿ ಹಳ್ಳಕ್ಕೆ ನೀರು ಹರಿಸಲಾಗುತ್ತದೆ. ಇದರಿಂದ ಕುಡಿಯುವ ನೀರಿನ ತೊಂದರೆ ತಪ್ಪಲಿದೆ. ಜಾನುವಾರುಗಳಿಗೆ ಅನುಕೂಲವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>