<p><strong>ಮಸ್ಕಿ:</strong> ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಲಾಗಿದೆ.</p>.<p>ಮಸ್ಕಿ ಪಟ್ಟಣದ ಮೈಲ್ 69ರ ಬಳಿ ಮಾ.17ರ ರಾತ್ರಿ ನೀರು ಕಾಲುವೆಗೆ ಹರಿದುಬಂದಿದೆ.</p>.<p>ಪಟ್ಟಣದ ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಲು ಪುರಸಭೆ ತಕ್ಷಣ ಕ್ರಮ ಕೈಗೊಂಡಿದ್ದು, ಕಾಲುವೆ ಪಕ್ಕದಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಇದಕ್ಕಾಗಿ 10 ಎಚ್.ಪಿ ಸಾಮರ್ಥ್ಯದ 9 ಮೋಟಾರ್ಗಳನ್ನು ಅಳವಡಿಸಲಾಗಿದ್ದು, ಅವುಗಳ ಮೂಲಕ ನಿರಂತರವಾಗಿ ನೀರು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ.</p>.<p>ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಪುರಸಭೆ ಸಿಬ್ಬಂದಿ ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಬೇಸಿಗೆ ತೀವ್ರವಾಗುವ ಮೊದಲು ಸಾಕಷ್ಟು ನೀರು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಪುರಸಭೆ ಅಧ್ಯಕ್ಷ ಸುರೇಶ ಹರಸೂರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬುಧವಾರ ಬೆಳಿಗ್ಗೆ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಮುಖ್ಯಾಧಿಕಾರಿ ನರಸರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ ಪರಿಶೀಲಿಸಿದರು. ಅಲ್ಲದೆ, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.</p>.<p>ಒಂದು ವಾರದಲ್ಲಿ ಪಟ್ಟಣದ ಎರಡೂ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-32-1341019546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಲಾಗಿದೆ.</p>.<p>ಮಸ್ಕಿ ಪಟ್ಟಣದ ಮೈಲ್ 69ರ ಬಳಿ ಮಾ.17ರ ರಾತ್ರಿ ನೀರು ಕಾಲುವೆಗೆ ಹರಿದುಬಂದಿದೆ.</p>.<p>ಪಟ್ಟಣದ ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಲು ಪುರಸಭೆ ತಕ್ಷಣ ಕ್ರಮ ಕೈಗೊಂಡಿದ್ದು, ಕಾಲುವೆ ಪಕ್ಕದಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಇದಕ್ಕಾಗಿ 10 ಎಚ್.ಪಿ ಸಾಮರ್ಥ್ಯದ 9 ಮೋಟಾರ್ಗಳನ್ನು ಅಳವಡಿಸಲಾಗಿದ್ದು, ಅವುಗಳ ಮೂಲಕ ನಿರಂತರವಾಗಿ ನೀರು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ.</p>.<p>ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಪುರಸಭೆ ಸಿಬ್ಬಂದಿ ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಬೇಸಿಗೆ ತೀವ್ರವಾಗುವ ಮೊದಲು ಸಾಕಷ್ಟು ನೀರು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಪುರಸಭೆ ಅಧ್ಯಕ್ಷ ಸುರೇಶ ಹರಸೂರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬುಧವಾರ ಬೆಳಿಗ್ಗೆ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಮುಖ್ಯಾಧಿಕಾರಿ ನರಸರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ ಪರಿಶೀಲಿಸಿದರು. ಅಲ್ಲದೆ, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.</p>.<p>ಒಂದು ವಾರದಲ್ಲಿ ಪಟ್ಟಣದ ಎರಡೂ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-32-1341019546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>