<p><strong>ಮಸ್ಕಿ</strong>: ಬಹುಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ಕೈಗೊಂಡಿರುವ ಜಲಧಾರೆ ಹಾಗೂ ಅಮೃತ 2.0 ಯೋಜನೆಯ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ನೂರೆಂಟು ವಿಘ್ನ ಹಾಗೂ ಹಲವು ತಾಂತ್ರಿಕ ಅಡ್ಡಿಗಳಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದ್ದು, ಜನರಿಗೆ ತೊಂದರೆಯಾಗಿದೆ.</p>.<p>ಕೃಷ್ಣಾ ನದಿಯಿಂದ ತಾಲ್ಲೂಕಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ₹2,700 ಕೋಟಿ ವೆಚ್ಚದ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪಟ್ಟಣದಲ್ಲಿ ನಡೆಯುತ್ತಿದೆ.</p>.<p>ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆ ಬದಿ ಪೈಪ್ಲೈನ್ ಅಳವಡಿಕೆಗೆ ವಿದ್ಯುತ್ ಕಂಬಗಳು, ಒಳಚರಂಡಿ ಹಾಗೂ ಪುರಸಭೆಯ ಕುಡಿಯುವ ನೀರಿನ ಪೈಪ್ಗಳು ಅಡ್ಡಿಯಾದ ಕಾರಣ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಇದೀಗ ಶುರುವಾಗಿದೆ. ಮಂದಗತಿಯಲ್ಲಿ ಸಾಗುತ್ತಿದೆ.</p>.<p>ಪುರಸಭೆ ಆಡಳಿತ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಲಧಾರೆ ಯೋಜನೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.</p>.<p><strong>ಅಮೃತ 2.0 ಯೋಜನೆ:</strong> ₹50 ಕೋಟಿ ವೆಚ್ಚದಲ್ಲಿ ಪಟ್ಟಣದ 23 ವಾರ್ಡ್ಗಳ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಅಮೃತ 2.0 ಯೋಜನೆ ಹಲವು ತಿಂಗಳಿನಿಂದ ಕಾರಣಗಳಿಂದ ಸ್ಥಗಿತಗೊಂಡಿದೆ.</p>.<p>ಪುರಸಭೆ ಹಾಗೂ ವಾಟರ್ ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ನಿಧಾನಗತಿಯ ಕೆಲಸದಿಂದ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.</p>.<p>ಇಲ್ಲಿಯವರೆಗೂ ಕಾಮಗಾರಿಯು ಶೇ 60ರಷ್ಟು ಪ್ರಗತಿ ಕಾಣಬೇಕಾಗಿತ್ತು. ಆದರೆ, ಶೇ 10ರಷ್ಟು ಸಹ ಪ್ರಗತಿ ಆಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಯೋಜನೆಯ ಗುತ್ತಿಗೆ ಪಡೆದ ಬಿಹಾರ ಮೂಲದ ಗುತ್ತಿಗೆದಾರರಿಗೆ ಹಲವಾರು ನೋಟಿಸ್ಗಳನ್ನು ನೀಡಿ ಎಚ್ಚರಿಕೆ ನೀಡಲಾಗಿದೆ.</p>.<p>1ನೇ ವಾರ್ಡ್ನ ಬಸವೇಶ್ವರ ನಗರದಲ್ಲಿ ಅರೆಬರೆ ಕಾಮಗಾರಿ ಮಾಡಿ ಬಿಟ್ಟು ಹೋದ ಗುತ್ತಿಗೆದಾರರು 4ನೇ ವಾರ್ಡ್ನಲ್ಲಿ ಕೆಲಸ ಆರಂಭಿಸಿ ಅಲ್ಲಿಯೂ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಎಲ್ಲೆಂದರಲ್ಲಿ ಕಾಂಕ್ರಿಟ್ ರಸ್ತೆ ಒಡೆದು ಹಾಳು ಮಾಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಈ ಯೋಜನೆ ತಂದಿದ್ದರು ಸಹ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜವ್ದಾರಿಯಿಂದ ಕಾಮಗಾರಿ ಪೂರ್ಣಗೊಳ್ಳದೆ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><blockquote>ಜಲಧಾರೆ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಿ ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ</blockquote><span class="attribution">ಆರ್.ಬಸನಗೌಡ ತುರ್ವಿಹಾಳ ಶಾಸಕ</span></div>.<div><blockquote>ಅಮೃತ ಯೋಜನೆ 2.0 ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾಮಗಾರಿಯ ವೇಗ ಹೆಚ್ಚಿಸುವಂತೆ ಗುತ್ತಿಗೆದಾರರಿಗೆ ಈಗಾಗಲೇ ಹಲವು ನೋಟೀಸ್ಗಳನ್ನು ನೀಡಲಾಗಿದೆ</blockquote><span class="attribution">ಪಿ.ಎಚ್.ಚವಾಣ್ ಎಇಇ ಜಲಮಂಡಳಿ ರಾಯಚೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಬಹುಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿ ಕೈಗೊಂಡಿರುವ ಜಲಧಾರೆ ಹಾಗೂ ಅಮೃತ 2.0 ಯೋಜನೆಯ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ನೂರೆಂಟು ವಿಘ್ನ ಹಾಗೂ ಹಲವು ತಾಂತ್ರಿಕ ಅಡ್ಡಿಗಳಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದ್ದು, ಜನರಿಗೆ ತೊಂದರೆಯಾಗಿದೆ.</p>.<p>ಕೃಷ್ಣಾ ನದಿಯಿಂದ ತಾಲ್ಲೂಕಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ₹2,700 ಕೋಟಿ ವೆಚ್ಚದ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪಟ್ಟಣದಲ್ಲಿ ನಡೆಯುತ್ತಿದೆ.</p>.<p>ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆ ಬದಿ ಪೈಪ್ಲೈನ್ ಅಳವಡಿಕೆಗೆ ವಿದ್ಯುತ್ ಕಂಬಗಳು, ಒಳಚರಂಡಿ ಹಾಗೂ ಪುರಸಭೆಯ ಕುಡಿಯುವ ನೀರಿನ ಪೈಪ್ಗಳು ಅಡ್ಡಿಯಾದ ಕಾರಣ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಇದೀಗ ಶುರುವಾಗಿದೆ. ಮಂದಗತಿಯಲ್ಲಿ ಸಾಗುತ್ತಿದೆ.</p>.<p>ಪುರಸಭೆ ಆಡಳಿತ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಲಧಾರೆ ಯೋಜನೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.</p>.<p><strong>ಅಮೃತ 2.0 ಯೋಜನೆ:</strong> ₹50 ಕೋಟಿ ವೆಚ್ಚದಲ್ಲಿ ಪಟ್ಟಣದ 23 ವಾರ್ಡ್ಗಳ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಅಮೃತ 2.0 ಯೋಜನೆ ಹಲವು ತಿಂಗಳಿನಿಂದ ಕಾರಣಗಳಿಂದ ಸ್ಥಗಿತಗೊಂಡಿದೆ.</p>.<p>ಪುರಸಭೆ ಹಾಗೂ ವಾಟರ್ ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ನಿಧಾನಗತಿಯ ಕೆಲಸದಿಂದ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.</p>.<p>ಇಲ್ಲಿಯವರೆಗೂ ಕಾಮಗಾರಿಯು ಶೇ 60ರಷ್ಟು ಪ್ರಗತಿ ಕಾಣಬೇಕಾಗಿತ್ತು. ಆದರೆ, ಶೇ 10ರಷ್ಟು ಸಹ ಪ್ರಗತಿ ಆಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಯೋಜನೆಯ ಗುತ್ತಿಗೆ ಪಡೆದ ಬಿಹಾರ ಮೂಲದ ಗುತ್ತಿಗೆದಾರರಿಗೆ ಹಲವಾರು ನೋಟಿಸ್ಗಳನ್ನು ನೀಡಿ ಎಚ್ಚರಿಕೆ ನೀಡಲಾಗಿದೆ.</p>.<p>1ನೇ ವಾರ್ಡ್ನ ಬಸವೇಶ್ವರ ನಗರದಲ್ಲಿ ಅರೆಬರೆ ಕಾಮಗಾರಿ ಮಾಡಿ ಬಿಟ್ಟು ಹೋದ ಗುತ್ತಿಗೆದಾರರು 4ನೇ ವಾರ್ಡ್ನಲ್ಲಿ ಕೆಲಸ ಆರಂಭಿಸಿ ಅಲ್ಲಿಯೂ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಎಲ್ಲೆಂದರಲ್ಲಿ ಕಾಂಕ್ರಿಟ್ ರಸ್ತೆ ಒಡೆದು ಹಾಳು ಮಾಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಈ ಯೋಜನೆ ತಂದಿದ್ದರು ಸಹ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜವ್ದಾರಿಯಿಂದ ಕಾಮಗಾರಿ ಪೂರ್ಣಗೊಳ್ಳದೆ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><blockquote>ಜಲಧಾರೆ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಿ ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ</blockquote><span class="attribution">ಆರ್.ಬಸನಗೌಡ ತುರ್ವಿಹಾಳ ಶಾಸಕ</span></div>.<div><blockquote>ಅಮೃತ ಯೋಜನೆ 2.0 ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾಮಗಾರಿಯ ವೇಗ ಹೆಚ್ಚಿಸುವಂತೆ ಗುತ್ತಿಗೆದಾರರಿಗೆ ಈಗಾಗಲೇ ಹಲವು ನೋಟೀಸ್ಗಳನ್ನು ನೀಡಲಾಗಿದೆ</blockquote><span class="attribution">ಪಿ.ಎಚ್.ಚವಾಣ್ ಎಇಇ ಜಲಮಂಡಳಿ ರಾಯಚೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>