<p><strong>ಮಸ್ಕಿ: </strong>‘5 ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ 5 (ಎ) ಕಾಲುವೆ ಯೋಜನೆ ಬಗ್ಗೆ ಗಮನ ಹರಿಸದೆ ಈಗ ಚುನಾವಣೆ ಸಂದರ್ಭದಲ್ಲಿ ಯೋಜನೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಆರೋಪಿಸಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ ಅವರನ್ನು ಪ್ರತಾಪಗೌಡ ಪಾಟೀಲರು ಹಲವಾರು ಬಾರಿ ಹೋರಾಟ ಸಮಿತಿ ಮುಖಂಡರನ್ನು ಕರೆದುಕೊಂಡು ಹೋಗಿ 5 (ಎ) ಕಾಲುವೆ ಯೋಜನೆ ಜಾರಿಗೆ ಒತ್ತಾಯಿಸಿದ್ದಾರೆ. ಆದರೆ, ಆ ಬಗ್ಗೆ ಚಕಾರವೆತ್ತದ ಡಿ.ಕೆ.ಶಿವಕುಮಾರ ಉಪ ಚುನಾವಣೆ ಸಂದರ್ಭದಲ್ಲಿ ಪ್ರತಾಪಗೌಡ ಪಾಟೀಲರ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯೋಜನೆ ಜಾರಿ ಮಾಡುತ್ತೇವೆ ಎಂದಿದ್ದಾರೆ. ಹಿಂದೆ ಏಕೆ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ ಸರ್ಕಾರ ನೀರಾವರಿ ಯೋಜನೆಗೆ ಎಂದು ವಿರೋಧ ಮಾಡಿಲ್ಲ. 5 (ಎ) ಕಾಲುವೆ ಯೋಜನೆಗೂ ನಮ್ಮ ವಿರೋಧವಿಲ್ಲ. ಆದರೆ. ಕಾಂಗ್ರೆಸ್ ಪ್ರೇರಿತ ಹೋರಾಟಕ್ಕೆ ನಮ್ಮ ವಿರೋಧ ಇದೆ. ಕ್ಷೇತ್ರದ ನೀರಾವರಿ ಯೋಜನೆಗಳನ್ನು ನಮ್ಮ ಸರ್ಕಾರದ ಎರಡು ವರ್ಷಗಳ ಅವದಿಯಲ್ಲಿ ಪೂರ್ಣಗೊಳಿಸುತ್ತೇವೆ’ ಎಂದರು.</p>.<p class="Briefhead">17ರಂದು ಕಾಂಗ್ರೆಸ್ ಮನೆಗೆ: ಟೀಕೆ</p>.<p>ಮಸ್ಕಿ: ‘ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ಗೆ ನೆಲೆ ಇಲ್ಲದಂತಾಗಿದೆ. 17 ರಂದು ನಡೆಯುವ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲೂ ಕ್ಷೇತ್ರದ ಮತದಾರರು ಕಾಂಗ್ರೆಸ್ನ್ನು ಗಂಟು ಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ’ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರತಾಪಗೌಡ ಪಾಟೀಲ ಅವರು ರಾಜ್ಯದ ಹಿತಕ್ಕಾಗಿ ಬಿಜೆಪಿಗೆ ಬಂದಿದ್ದಾರೆ ವಿನಃ ಯಾವುದೇ ಆಸೆಗಾಗಿ ಬಂದಿಲ್ಲ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ‘ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತ್ಯಾತೀತ ವ್ಯಕ್ತಿ ಎಂದು ತಿಳಿಸಿದ ಅವರು ಚನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಗೆಲುವು ಖಚಿತ ಎಂದರು.</p>.<p class="Briefhead">ದಲಿತರನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಆರೋಪ</p>.<p>ಮಸ್ಕಿ: ದಲಿತರನ್ನು ರಾಜಕೀಯವಾಗಿ ಮುಗಿಸಿದ್ದೆ ಸಿದ್ದರಾಮಯ್ಯ ಎಂದು ಬಿಜೆಪಿ ಎಸ್ಸಿ ಮೊರ್ಚಾದ ರಾಜ್ಯ ಘಟಕದ ಅಧ್ಯಕ್ಷ ಛಲುವಾದಿ ನಾರಾಯಣ ಸ್ವಾಮಿ ಆರೋಪಿಸಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಲಿತರು ರಾಜಕೀಯವಾಗಿ ಮುಂದೆ ಬರಬಾರದು ಎಂಬ ಕಾರಣಕ್ಕೆ ಖರ್ಗೆ, ಡಾ. ಪರಮೇಶ್ವರ ಸೇರಿದಂತೆ ಅನೇಕರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇದೇ ಸಿದ್ದರಾಮಯ್ಯ‘ ಎಂದು ದೂರಿದರು.</p>.<p>‘ಡಾ.ಅಂಬೇಡ್ಕರ್, ಬಾಬು ಜಗಜೀವನರಾಂ ಸೇರಿದಂತೆ ದಲಿತರಿಗೆ ಯಾವ ರಾಜಕೀಯ ಸ್ಥಾನ ನೀಡದೆ ತನ್ನ ಮತ ಬ್ಯಾಂಕ್ ಗಳನ್ನಾಗಿ ಮಾಡಿಕೊಂಡಿದ್ದು ಕಾಂಗ್ರೆಸ್. ಈಗ ದಲಿತರ ಮತ ಪಡೆಯಲು ಕಾಂಗ್ರೆಸ್ ಮುಖಂಡರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ’ ಎಂದರು.</p>.<p>ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ ಮತ್ತು ಬಿಜೆಪಿ ಪರವಾಗಿ ದಲಿತ ಸಮುದಾಯ ಇದೆ. ದಲಿತರ ಏಳ್ಗೆಗಾಗಿ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>‘5 ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ 5 (ಎ) ಕಾಲುವೆ ಯೋಜನೆ ಬಗ್ಗೆ ಗಮನ ಹರಿಸದೆ ಈಗ ಚುನಾವಣೆ ಸಂದರ್ಭದಲ್ಲಿ ಯೋಜನೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಆರೋಪಿಸಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ ಅವರನ್ನು ಪ್ರತಾಪಗೌಡ ಪಾಟೀಲರು ಹಲವಾರು ಬಾರಿ ಹೋರಾಟ ಸಮಿತಿ ಮುಖಂಡರನ್ನು ಕರೆದುಕೊಂಡು ಹೋಗಿ 5 (ಎ) ಕಾಲುವೆ ಯೋಜನೆ ಜಾರಿಗೆ ಒತ್ತಾಯಿಸಿದ್ದಾರೆ. ಆದರೆ, ಆ ಬಗ್ಗೆ ಚಕಾರವೆತ್ತದ ಡಿ.ಕೆ.ಶಿವಕುಮಾರ ಉಪ ಚುನಾವಣೆ ಸಂದರ್ಭದಲ್ಲಿ ಪ್ರತಾಪಗೌಡ ಪಾಟೀಲರ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯೋಜನೆ ಜಾರಿ ಮಾಡುತ್ತೇವೆ ಎಂದಿದ್ದಾರೆ. ಹಿಂದೆ ಏಕೆ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ ಸರ್ಕಾರ ನೀರಾವರಿ ಯೋಜನೆಗೆ ಎಂದು ವಿರೋಧ ಮಾಡಿಲ್ಲ. 5 (ಎ) ಕಾಲುವೆ ಯೋಜನೆಗೂ ನಮ್ಮ ವಿರೋಧವಿಲ್ಲ. ಆದರೆ. ಕಾಂಗ್ರೆಸ್ ಪ್ರೇರಿತ ಹೋರಾಟಕ್ಕೆ ನಮ್ಮ ವಿರೋಧ ಇದೆ. ಕ್ಷೇತ್ರದ ನೀರಾವರಿ ಯೋಜನೆಗಳನ್ನು ನಮ್ಮ ಸರ್ಕಾರದ ಎರಡು ವರ್ಷಗಳ ಅವದಿಯಲ್ಲಿ ಪೂರ್ಣಗೊಳಿಸುತ್ತೇವೆ’ ಎಂದರು.</p>.<p class="Briefhead">17ರಂದು ಕಾಂಗ್ರೆಸ್ ಮನೆಗೆ: ಟೀಕೆ</p>.<p>ಮಸ್ಕಿ: ‘ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ಗೆ ನೆಲೆ ಇಲ್ಲದಂತಾಗಿದೆ. 17 ರಂದು ನಡೆಯುವ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲೂ ಕ್ಷೇತ್ರದ ಮತದಾರರು ಕಾಂಗ್ರೆಸ್ನ್ನು ಗಂಟು ಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ’ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರತಾಪಗೌಡ ಪಾಟೀಲ ಅವರು ರಾಜ್ಯದ ಹಿತಕ್ಕಾಗಿ ಬಿಜೆಪಿಗೆ ಬಂದಿದ್ದಾರೆ ವಿನಃ ಯಾವುದೇ ಆಸೆಗಾಗಿ ಬಂದಿಲ್ಲ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ‘ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತ್ಯಾತೀತ ವ್ಯಕ್ತಿ ಎಂದು ತಿಳಿಸಿದ ಅವರು ಚನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಗೆಲುವು ಖಚಿತ ಎಂದರು.</p>.<p class="Briefhead">ದಲಿತರನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಆರೋಪ</p>.<p>ಮಸ್ಕಿ: ದಲಿತರನ್ನು ರಾಜಕೀಯವಾಗಿ ಮುಗಿಸಿದ್ದೆ ಸಿದ್ದರಾಮಯ್ಯ ಎಂದು ಬಿಜೆಪಿ ಎಸ್ಸಿ ಮೊರ್ಚಾದ ರಾಜ್ಯ ಘಟಕದ ಅಧ್ಯಕ್ಷ ಛಲುವಾದಿ ನಾರಾಯಣ ಸ್ವಾಮಿ ಆರೋಪಿಸಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಲಿತರು ರಾಜಕೀಯವಾಗಿ ಮುಂದೆ ಬರಬಾರದು ಎಂಬ ಕಾರಣಕ್ಕೆ ಖರ್ಗೆ, ಡಾ. ಪರಮೇಶ್ವರ ಸೇರಿದಂತೆ ಅನೇಕರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇದೇ ಸಿದ್ದರಾಮಯ್ಯ‘ ಎಂದು ದೂರಿದರು.</p>.<p>‘ಡಾ.ಅಂಬೇಡ್ಕರ್, ಬಾಬು ಜಗಜೀವನರಾಂ ಸೇರಿದಂತೆ ದಲಿತರಿಗೆ ಯಾವ ರಾಜಕೀಯ ಸ್ಥಾನ ನೀಡದೆ ತನ್ನ ಮತ ಬ್ಯಾಂಕ್ ಗಳನ್ನಾಗಿ ಮಾಡಿಕೊಂಡಿದ್ದು ಕಾಂಗ್ರೆಸ್. ಈಗ ದಲಿತರ ಮತ ಪಡೆಯಲು ಕಾಂಗ್ರೆಸ್ ಮುಖಂಡರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ’ ಎಂದರು.</p>.<p>ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ ಮತ್ತು ಬಿಜೆಪಿ ಪರವಾಗಿ ದಲಿತ ಸಮುದಾಯ ಇದೆ. ದಲಿತರ ಏಳ್ಗೆಗಾಗಿ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>