ಮುದಗಲ್ (ರಾಯಚೂರು ಜಿಲ್ಲೆ): ’ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಕಾರ್ಯಕರ್ತರು ನೀಡಿದ್ದ ದೇಣಿಗೆಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ಅಗತ್ಯವಿದ್ದರೆ, ಆ ಗ್ರಾಮಗಳಿಗೆ ಹೋಗಿ ಪರಿಶೀಲನೆ ಮಾಡಲಿ. ಈ ವಿಷಯದಲ್ಲಿ ದೇವರ ಮುಂದೆ ಪ್ರಮಾಣ ಮಾಡಲೂ ಸಿದ್ಧ‘ ಎಂದು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೇಳಿದರು.